ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm