ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm