ಬ್ರೇಕಿಂಗ್ ನ್ಯೂಸ್
19-05-24 10:42 am HK News Desk ಕರ್ನಾಟಕ
ಹುಬ್ಬಳ್ಳಿ , ಮೇ 19: ಯುವತಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣ ಸಂಬಂಧ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿಯ ತಲೆದಂಡವಾಗಿದೆ. ಅಂಜಲಿ ಕೊಲೆ ಹಿನ್ನೆಲೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದ ಆರೋಪದ ಮೇಲೆ ಈ ಹಿಂದೆ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಮಹಿಳಾ ಹೆಡ್ಕಾನ್ಸ್ಟೆಬಲ್ ಇಬ್ಬರನ್ನ ಅಮಾನತು ಮಾಡಲಾಗಿತ್ತು. ಈಗ ಶನಿವಾರ ಹುಬ್ಬಳ್ಳಿ-ಧಾರವಾಡ ಕಾನೂನು ಸುವ್ಯವಸ್ಥೆ ಡಿಸಿಪಿ ಯನ್ನ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಸುವ್ಯವಸ್ಥೆ ಡಿಸಿಪಿ ರಾಜೀವ್ ಅಮಾನತಾದ ಅಧಿಕಾರಿ. ಈ ಹತ್ಯೆ ಪ್ರಕರಣದಲ್ಲಿ ಮೂವರು ಪೊಲೀಸರ ಅಮಾನತಾದಂತಾಗಿದೆ.
ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆಗೆ ಅಂಜಲಿ ಕುಟುಂಬದವರು ಹೋಗಿ ಮಾಹಿತಿ ನೀಡಿದ ಬಳಿಕವೂ ಪೊಲೀಸರು ಕ್ರಮ ಜರುಗಿಸಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ಹುಬ್ಬಳ್ಳಿ - ಧಾರವಾಡ ಪೊಲೀಸ್ ಕಮೀಷನರ್ ರೇಣುಕಾ ಇನ್ಸ್ಪೆಕ್ಟರ್ ಚಂದ್ರಶೇಖರ ಚಿಕ್ಕೋಡಿ ಹಾಗೂ ರೇಖಾ ಹಾವರಡ್ಡಿ ಯನ್ನ ಅಮಾನತು ಮಾಡಿದ್ದರು. ಇನ್ನೂ ಕೆಲ ಅಧಿಕಾರಿಗಳ ಮೇಲೆ ನಿರ್ಲಕ್ಷ್ಯ ಆರೋಪ ಮಾಡಲಾಗಿದ್ದು ಅವರಿಗೂ ಕ್ರಮದ ಭಯ ಕಾಡುತ್ತಿದೆ.
ಪ್ರೀತಿ ನಿರಾಕರಿಸಿದ್ದಕ್ಕೆ ಕಳೆದ ಮೇ 15 ರಂದು ಮುಂಜಾನೆ ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ (20) ಮನೆಗೆ ನುಗ್ಗಿದ ಯುವಕ ಚಾಕುವಿನಿಂದ ಎದೆ, ಹೊಟ್ಟೆ ಹಾಗೂ ಕುತ್ತಿಗೆ ಇರಿದು ಪರಾರಿಯಾಗಿದ್ದ. ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದ್ದರಿಂದ ಮನೆಯವರ ಎದುರಲ್ಲೇ ಯುವತಿ ಅಂಜಲಿ ಕೊನೆಯುಸಿರೆಳೆದಿದ್ದಳು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ (21) ಎಂಬಾತನನ್ನು ದಾವಣಗೆರೆಯಲ್ಲಿ ರೈಲ್ವೆ ಪೊಲೀಸರ ನೆರವಿನೊಂದಿಗೆ ಬಂಧಿಸಿ ಹುಬ್ಬಳ್ಳಿಗೆ ಕರೆತರಲಾಗಿದೆ.
Karnataka Police Suspends DCP P Rajeev For Alleged Negligence In Anjali murder case in Hubballi. It is said that Rajeev has shown negligence in the case and therefore state government has issued for suspension.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm