ಬ್ರೇಕಿಂಗ್ ನ್ಯೂಸ್
19-05-24 11:54 am Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಸೇಫ್ ಆಗಿದ್ದಾರೆ. 25 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ರಾತ್ರಿ 11.20ಕ್ಕೆ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಪೈಲಟ್ ತಕ್ಷಣವೇ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಬಳಿಕ ವಿಮಾನದಲ್ಲಿದ್ದ 179 ಪ್ರಯಾಣಿಕರನ್ನು ಸೇಫ್ ಆಗಿ ಕೆಳಗೆ ಇಳಿಸಿದ್ದಾರೆ. ಲ್ಯಾಂಡಿಂಗ್ ಮಾಡಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ವಿಮಾನ ಲ್ಯಾಂಡ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಏರ್ಲೈನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೇಕಾಫ್ ಆದ ನಂತರ ಬಲ ಇಂಜಿನ್ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಪರಿಣಾಮ ಬೆಂಗಳೂರು-ಕೊಚ್ಚಿ ವಿಮಾನವನ್ನು ವಾಪಸ್ ಲ್ಯಾಂಡಿಗ್ ಮಾಡಲಾಯಿತು. ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
Bengaluru: An Air India Express flight from Bengaluru to Kochi had an emergency landing at the Kempegowda International Airport minutes after take-off, late on Saturday night, after one of the aircraft engines caught fire.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm