ಬ್ರೇಕಿಂಗ್ ನ್ಯೂಸ್
19-05-24 11:54 am Bangalore Correspondent ಕರ್ನಾಟಕ
ಬೆಂಗಳೂರು, ಮೇ 19: ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆ ವಿಮಾನವನ್ನ ತುರ್ತು ಲ್ಯಾಂಡಿಂಗ್ ಮಾಡಿ ಅನಾಹುತ ತಪ್ಪಿದೆ. ವಿಮಾನದಲ್ಲಿದ್ದ 179 ಪ್ರಯಾಣಿಕರು ಸೇಫ್ ಆಗಿದ್ದಾರೆ. 25 ಜನಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ.
ರಾತ್ರಿ 11.20ಕ್ಕೆ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಎಚ್ಚೆತ್ತುಕೊಂಡ ಪೈಲಟ್ ತಕ್ಷಣವೇ ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಬಳಿಕ ವಿಮಾನದಲ್ಲಿದ್ದ 179 ಪ್ರಯಾಣಿಕರನ್ನು ಸೇಫ್ ಆಗಿ ಕೆಳಗೆ ಇಳಿಸಿದ್ದಾರೆ. ಲ್ಯಾಂಡಿಂಗ್ ಮಾಡಿ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿ, ಲ್ಯಾಂಡಿಂಗ್ ನಂತರ ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಮತ್ತು ವಿಮಾನ ಲ್ಯಾಂಡ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು ಎಂದು ಎಂದು ಸ್ಪಷ್ಟಪಡಿಸಿದ್ದಾರೆ.
ಏರ್ಲೈನ್ ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದು, ಟೇಕಾಫ್ ಆದ ನಂತರ ಬಲ ಇಂಜಿನ್ನಿಂದ ಬೆಂಕಿ ಹೊತ್ತಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿತ್ತು. ಪರಿಣಾಮ ಬೆಂಗಳೂರು-ಕೊಚ್ಚಿ ವಿಮಾನವನ್ನು ವಾಪಸ್ ಲ್ಯಾಂಡಿಗ್ ಮಾಡಲಾಯಿತು. ಲ್ಯಾಂಡ್ ಆಗುತ್ತಿದ್ದಂತೆ ಬೆಂಕಿ ನಂದಿಸುವ ಕಾರ್ಯ ಮಾಡಲಾಗಿದೆ.
Bengaluru: An Air India Express flight from Bengaluru to Kochi had an emergency landing at the Kempegowda International Airport minutes after take-off, late on Saturday night, after one of the aircraft engines caught fire.
10-12-25 09:40 pm
HK News Desk
ಬೆಂಗಳೂರಿನಲ್ಲಿ ರಸ್ತೆ ಅಪಘಾತ ; ಆರು ತಿಂಗಳ ಹಿಂದಷ್ಟ...
10-12-25 05:37 pm
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
10-12-25 11:13 pm
HK News Desk
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
10-12-25 11:04 pm
Mangalore Correspondent
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
“Board Exams Made Easier: AI Shikshak Breaks...
10-12-25 06:01 pm
Mangalore Accident, Gowjee Events owner Death...
10-12-25 04:00 pm
10-12-25 10:14 pm
Udupi Correspondent
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm