ಬ್ರೇಕಿಂಗ್ ನ್ಯೂಸ್
22-05-24 04:54 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 22: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ದಾಳಿ ನಡೆಸಿ ವೈದ್ಯ ಸೇರಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳ 11 ಸ್ಥಳಗಳಲ್ಲಿ ಎನ್ಐಎ ಶೋಧ ನಡೆಸಿದ್ದು, ಒಟ್ಟು 11 ಮಂದಿಯನ್ನು ವಶಕ್ಕೆ ಪಡೆದಿದೆ.
ಮಂಗಳವಾರ ಮುಂಜಾನೆ ಬೆಂಗಳೂರಿನ ಜೆ.ಪಿ. ನಗರ ಮತ್ತು ಹೆಗಡೆ ನಗರದ ಎರಡು ಕಡೆ ಹಾಗೂ ಹುಬ್ಬಳ್ಳಿಯ ಕಸಬಾ ಪೇಟೆ ಠಾಣೆ ವ್ಯಾಪ್ತಿಯ 2 ಕಡೆ ಇಬ್ಬರ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಲಾಗಿದೆ. ಈ ವೇಳೆ, ಬೆಂಗಳೂರಿನಲ್ಲಿ ಡಾ. ಸಬೀಲ್ ಅಹ್ಮದ್ ಅಲಿಯಾಸ್ ಮೋಟು ಡಾಕ್ಟರ್ ಮತ್ತು ಹುಬ್ಬಳ್ಳಿಯ ಶೋಯಬ್ ಮಿರ್ಜಾ ಅಲಿ ಯಾಸ್ ಛೋಟು ಹಾಗೂ ಈತನ ಸಹೋದರ ಅಜೀಜ್ ಅಹಮದ್ ಮಿರ್ಜಾ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಕೆಫೆ ಸ್ಫೋಟದ ಪ್ರಮುಖ ಆರೋಪಿಗಳಾದ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್ಗೆ ವಿದೇಶದಲ್ಲಿರುವ ಹ್ಯಾಂಡ್ಲರ್ಗಳ ಸೂಚನೆ ಮೇರೆಗೆ ಆರ್ಥಿಕ ನೆರವು ನೀಡಿದ್ದರು. ಅಲ್ಲದೆ ಈ ಹಿಂದೆ ಇದೇ ಆರೋಪಿಗಳನ್ನು ವಿದೇಶದಿಂದಲೇ ನಿಯಂತ್ರಿಸುತ್ತಿದ್ದರು ಎನ್ನಲಾಗಿದೆ. ದಾಳಿ ಸಂದರ್ಭದಲ್ಲಿ ಡಿಜಿಟಲ್ ಸಾಮಗ್ರಿ ಹಾಗೂ ಕೆಲವು ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಉಗ್ರರು ಕೋಡ್ವರ್ಡ್ ಮೂಲಕ ಸಂಭಾಷಣೆ ನಡೆಸುತ್ತಿದ್ದರು. ಜೊತೆಗೆ, ಐಸಿಸ್ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಮೇರೆಗೆ 10-12 ಜನರಿದ್ದ ಅಧಿಕಾರಿಗಳ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸಿತ್ತು. ಮಂಗಳವಾರ ಬೆಳಗ್ಗೆ ಪ್ರತ್ಯೇಕ ಮೂರು ತಂಡಗಳಲ್ಲಿ ಕಸಬಾಪೇಟೆ ವ್ಯಾಪ್ತಿಯ ಹಳೇ ಹುಬ್ಬಳ್ಳಿ ರಜಿಯಾ ಟೌನ್ ನಿವಾಸಿ ಶೋಯೆಬ್ ಮಿರ್ಜಾ ಹಾಗೂ ಸಹೋದರ ಅಜೀಜ್ ಅಹಮದ್ ಮಿರ್ಜಾ ನಿವಾಸಕ್ಕೆ ತೆರಳಿ ವಿಚಾರಣೆ ಆರಂಭಿಸಿದ್ದರು. ಅನಂತರ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಬೆಂಗಳೂರಿನ ಎನ್ಐಎ ಕಚೇರಿಗೆ ಕರೆದೊಯ್ದರು ಎನ್ನಲಾಗಿದೆ.
The National Investigation Agency (NIA) has arrested three persons, including a doctor, in connection with the Rameswaram café blast case. The NIA conducted searches at 11 locations in Karnataka, Telangana, Andhra Pradesh and Tamil Nadu and detained 11 people.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm