ಬ್ರೇಕಿಂಗ್ ನ್ಯೂಸ್
22-05-24 11:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ.22: ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲೂ ಸಜ್ಜಾಗಿರಬೇಕು. ಮಳೆ ಬಂದಾಗ ಮನೆಗಳಿಗೆ ನೀರು ನುಗ್ಗಿ ಸಮಸ್ಯೆಯಾಗಿರುವುದು ಕಂಡು ಬಂದರೆ ಸಂಬಂಧಪಟ್ಟ ಎಂಜಿನಿಯರ್ಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ನಗರದಲ್ಲಿ ಜೋರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಡಿಸಿಎಂ, ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಗರ ಪ್ರದಕ್ಷಿಣೆ ಕೈಗೊಂಡ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, '' ಜೂನ್ನಿಂದ ಮುಂಗಾರು ಆರಂಭವಾಗಲಿದೆ. ವಾಡಿಕೆಗಿಂತ ಹೆಚ್ಚು ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗುವ ಮುನ್ಸೂಚನೆ ಇದೆ. ಹೀಗಾಗಿ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ಸಿಟಿ ರೌಂಡ್ಸ್ ನಡೆಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ,'' ಎಂದರು.
ಬಿಬಿಎಂಪಿ, ಜಲಮಂಡಳಿ, ಬಿಡಿಎ, ಬೆಸ್ಕಾಂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಒಣ ಹಾಗೂ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳು, ರೆಂಬೆ-ಕೊಂಬೆಗಳನ್ನು ಅನಾಹುತ ಸಂಭವಿಸುವುದಕ್ಕೆ ಮುನ್ನವೇ ತೆರವುಗೊಳಿಸಬೇಕು. ಪಾದಚಾರಿ ಮಾರ್ಗಗಳ ದುರಸ್ತಿ, ಕಾಲುವೆಗಳಲ್ಲಿಹೂಳು ತೆರವು ಕೈಗೊಂಡು, ಕಾಲುವೆಗಳಿಗೆ ಕಸ ಹಾಕುವುದನ್ನು ತಡೆಯಬೇಕು. ಮೆಟ್ರೊ, ಮೇಲ್ಸೇತುವೆ ಕಾಮಗಾರಿಗಳ ಸ್ಥಳದಲ್ಲಿಬಿದ್ದಿರುವ ಅವಶೇಷಗಳನ್ನು ತೆರವು ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ,'' ಎಂದು ಹೇಳಿದರು.
ಗಾಳಿ ಆಂಜನೇಯ ದೇವಸ್ಥಾನ ಬಳಿಯ ರಾಜಕಾಲುವೆಯಲ್ಲಿಮಳೆ ಬಂದಾಗ ಪ್ರವಾಹ ಉಂಟಾಗುವುದನ್ನು ತಡೆಯಲು 11.50 ಕೋಟಿ ರೂ. ವೆಚ್ಚದಲ್ಲಿರೂಪಿಸಿರುವ ಸಮಾನಾಂತರ ಕಾಲುವೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು. ರಾಜಕಾಲುವೆಗೆ ಜನರು ಕಸ ಎಸೆಯುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು. ಈ ವರ್ಷ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಅಮಾನತು ಮಾಡಬೇಕಾಗುತ್ತದೆ,'' ಎಂದು ಮುಖ್ಯ ಎಂಜಿನಿಯರ್ಗೆ ಸಿಎಂ ಎಚ್ಚರಿಕೆ ನೀಡಿದರು.
With the onset of monsoon and the heavy rains during the last few days causing problems in some parts of the city, Chief Minister Siddaramaiah along with Deputy Chief Minister D K Shivakumar took a round of inspection in different wards and also the review the progress of various ongoing works.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
26-02-25 12:47 pm
HK News Desk
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
26-02-25 03:40 pm
Mangalore Correspondent
Urwa Police, Mangalore, Selfie, Suspend: ಸೈಬರ...
25-02-25 10:58 pm
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
26-02-25 01:27 pm
HK News Desk
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm