ಬ್ರೇಕಿಂಗ್ ನ್ಯೂಸ್
23-05-24 02:07 pm HK NEWS ಕರ್ನಾಟಕ
ಬೆಂಗಳೂರು, ಮೇ 23: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್ಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.
ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.
ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.
ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.ನಂತರ ಹೋಟೆಲ್ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟರು.
ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ಹಿಂದೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
The Bengaluru police on Thursday said three well-known hotels in Bengaluru received emails threatening a bomb blast. These hotels include The Oterra, said DCP South East Bengaluru.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 04:51 pm
HK News Staffer
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm