ಬ್ರೇಕಿಂಗ್ ನ್ಯೂಸ್
24-05-24 06:35 pm HK News Desk ಕರ್ನಾಟಕ
ಬಾಗಲಕೋಟೆ, ಮೇ.24: ಸತ್ತು ಹೋಗಿದೆ ಎಂದು ತಿಳಿದು ಹಸುಗೂಸು ಮಗುವನ್ನು ಇನ್ನೇನು ಅಂತ್ಯಸಂಸ್ಕಾರ ಮಾಡಬೇಕು ಎಂದು ತಯಾರಿ ನಡೆಸುತ್ತಿದ್ದಾಗಲೇ ಪವಾಡವೆಂಬಂತೆ ಮಗು ಕೆಮ್ಮಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಮಗು ಪ್ರಜ್ಞೆ ತಪ್ಪಿದ್ದನ್ನು ಸತ್ತಿದೆಯೆಂದು ಭಾವಿಸಿದ ಕುಟುಂಬ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದು ಅಷ್ಟರಲ್ಲೇ ಮಗು ಕೆಮ್ಮಿದೆ. ಇದರಿಂದ ಕುಟುಂಬ ಎದೆ ಬಡಿದುಕೊಂಡು ಗೋಳಾಡಿ ಮಗು ಜೀವಂತ ಇರುವುದನ್ನು ತಿಳಿದು ಕಣ್ಣೀರು ಹಾಕಿದೆ.
ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಹೃದಯ ಸಂಬಂಧಿ ಕಾಯಿಲೆಯಿಂದ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿತ್ತು. ಇದರಿಂದಾಗಿ ಮಗುವಿಗೆ ಅಂಗಾಗ ವೈಫಲ್ಯವೂ ಇತ್ತು. ಹೀಗಾಗಿ ಕೆಲ ದಿನಗಳ ಹಿಂದೆ ಮಗುವನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದಾಗ ಪೋಷಕರು ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು. ಇದರಿಂದ ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟರಲ್ಲಿ ಮಗು ಕೆಮ್ಮಿದ್ದು ತಾನಿನ್ನೂ ಸತ್ತಿಲ್ಲ ಎಂದು ತೋರಿಸಿಕೊಟ್ಟಿದೆ. ಇದರಿಂದ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.
ಇದನ್ನು ದೇವರ ಪವಾಡ ಎಂದು ಭಾವಿಸಿ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಭಾವಿಸಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದು ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯರು, 'ಮಗು ಬದುಕುವುದು ಕಷ್ಟ ಎಂದು ಮಾತ್ರ ಬಾಗಲಕೋಟೆ ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆದರೆ ಅದು ಮೃತಪಟ್ಟಿದೆ ಎಂದು ಯಾವ ವೈದ್ಯರೂ ಘೋಷಣೆ ಮಾಡಿಲ್ಲ. ಆದರೆ ಕುಟುಂಬಸ್ಥರು ಮಗು ಪ್ರಜ್ಞೆ ತಪ್ಪಿಧ್ದನ್ನೇ ತಪ್ಪಾಗಿ ಭಾವಿಸಿ ಅದು ಮೃತಪಟ್ಟಿದೆ ಎಂದು ಅರ್ಥೈಸಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ನಾವು ಮಗುವಿಗೆ ಚಿಕಿತ್ಸೆ ನೀಡುತ್ತಿದ್ದೇವೆ' ಎಂದಿದ್ದಾರೆ.
Dead' 13 Months Baby Comes Alive Seconds Before Cremation In Bagalkot. The baby suffering from multiorgan failure was admitted to a private hospital. The baby went unconscious while the parents were returning home. The video of this has gone viral on social media.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm