ಬ್ರೇಕಿಂಗ್ ನ್ಯೂಸ್
24-05-24 06:35 pm HK News Desk ಕರ್ನಾಟಕ
ಬಾಗಲಕೋಟೆ, ಮೇ.24: ಸತ್ತು ಹೋಗಿದೆ ಎಂದು ತಿಳಿದು ಹಸುಗೂಸು ಮಗುವನ್ನು ಇನ್ನೇನು ಅಂತ್ಯಸಂಸ್ಕಾರ ಮಾಡಬೇಕು ಎಂದು ತಯಾರಿ ನಡೆಸುತ್ತಿದ್ದಾಗಲೇ ಪವಾಡವೆಂಬಂತೆ ಮಗು ಕೆಮ್ಮಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಮಗು ಪ್ರಜ್ಞೆ ತಪ್ಪಿದ್ದನ್ನು ಸತ್ತಿದೆಯೆಂದು ಭಾವಿಸಿದ ಕುಟುಂಬ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದು ಅಷ್ಟರಲ್ಲೇ ಮಗು ಕೆಮ್ಮಿದೆ. ಇದರಿಂದ ಕುಟುಂಬ ಎದೆ ಬಡಿದುಕೊಂಡು ಗೋಳಾಡಿ ಮಗು ಜೀವಂತ ಇರುವುದನ್ನು ತಿಳಿದು ಕಣ್ಣೀರು ಹಾಕಿದೆ.
ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ಎಂಬ ದಂಪತಿಯ ದ್ಯಾಮಣ್ಣ ಭಜಂತ್ರಿ ಎಂಬ 13 ತಿಂಗಳ ಹಸುಗೂಸು ಹೃದಯ ಸಂಬಂಧಿ ಕಾಯಿಲೆಯಿಂದ ಉಸಿರಾಟದ ಸಮಸ್ಯೆಯನ್ನು ಎದುರಿಸುತ್ತಿತ್ತು. ಇದರಿಂದಾಗಿ ಮಗುವಿಗೆ ಅಂಗಾಗ ವೈಫಲ್ಯವೂ ಇತ್ತು. ಹೀಗಾಗಿ ಕೆಲ ದಿನಗಳ ಹಿಂದೆ ಮಗುವನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕುವುದು ಕಷ್ಟ ಎಂದು ಹೇಳಿದಾಗ ಪೋಷಕರು ಮಗುವನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ದಿದ್ದರು. ಅಷ್ಟರಲ್ಲಿ ಮಗು ಪ್ರಜ್ಞೆ ತಪ್ಪಿತ್ತು. ಇದರಿಂದ ಮಗು ಸಾವನ್ನಪ್ಪಿದೆ ಎಂದು ಭಾವಿಸಿದ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಅಷ್ಟರಲ್ಲಿ ಮಗು ಕೆಮ್ಮಿದ್ದು ತಾನಿನ್ನೂ ಸತ್ತಿಲ್ಲ ಎಂದು ತೋರಿಸಿಕೊಟ್ಟಿದೆ. ಇದರಿಂದ ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ.
ಇದನ್ನು ದೇವರ ಪವಾಡ ಎಂದು ಭಾವಿಸಿ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಇದು ಮುರ್ತುಜಾ ಖಾದ್ರಿ ಪವಾಡ ಎಂದು ಭಾವಿಸಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದೊಯ್ದು ನಂತರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸದ್ಯ ಇಳಕಲ್ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆಸ್ಪತ್ರೆ ವೈದ್ಯರು, 'ಮಗು ಬದುಕುವುದು ಕಷ್ಟ ಎಂದು ಮಾತ್ರ ಬಾಗಲಕೋಟೆ ಖಾಸಗಿ ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ. ಆದರೆ ಅದು ಮೃತಪಟ್ಟಿದೆ ಎಂದು ಯಾವ ವೈದ್ಯರೂ ಘೋಷಣೆ ಮಾಡಿಲ್ಲ. ಆದರೆ ಕುಟುಂಬಸ್ಥರು ಮಗು ಪ್ರಜ್ಞೆ ತಪ್ಪಿಧ್ದನ್ನೇ ತಪ್ಪಾಗಿ ಭಾವಿಸಿ ಅದು ಮೃತಪಟ್ಟಿದೆ ಎಂದು ಅರ್ಥೈಸಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ನಾವು ಮಗುವಿಗೆ ಚಿಕಿತ್ಸೆ ನೀಡುತ್ತಿದ್ದೇವೆ' ಎಂದಿದ್ದಾರೆ.
Dead' 13 Months Baby Comes Alive Seconds Before Cremation In Bagalkot. The baby suffering from multiorgan failure was admitted to a private hospital. The baby went unconscious while the parents were returning home. The video of this has gone viral on social media.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm