ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
08-09-25 05:21 pm
HK News Desk
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm