ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 04:09 pm
HK News Desk
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
18-06-25 02:10 pm
Mangalore Correspondent
Mangalore Accident, Jeppinamogaru, Aman Rao,...
18-06-25 10:24 am
Mangalore DC Mullai Muhilan Transferred, Dars...
17-06-25 09:57 pm
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm