ಬ್ರೇಕಿಂಗ್ ನ್ಯೂಸ್
24-05-24 09:14 pm HK News Desk ಕರ್ನಾಟಕ
ಹುಬ್ಬಳ್ಳಿ, ಮೇ.24: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಆರೋಪಿಯ ಬಾಯಿಬಿಡಿಸಿದ್ದು ಕೊಲೆ ಹಿನ್ನೆಲೆ ಬಗ್ಗೆ ತಿಳಿದುಕೊಂಡಿದ್ದಾರೆ.
ಆರೋಪಿ ಗಿರೀಶ್ ಕೇವಲ ಒಂದು ಸಾವಿರ ರೂಪಾಯಿಗಾಗಿ ಕೊಲೆ ಮಾಡಿದ್ದಾಗಿ ಅಧಿಕಾರಿಗಳ ಮುಂದೆ ಹೇಳಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ. ಅಂಜಲಿ ಮತ್ತು ಗಿರೀಶ್ ಹಲವಾರು ವರ್ಷಗಳಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದರು. ಗಿರೀಶ್ ಮೈಸೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು ಪರಸ್ಪರ ಸಂಪರ್ಕದಲ್ಲಿದ್ದರು. ಮೇ 17ರಂದು ರಾತ್ರಿ ಅಂಜಲಿ, ಫೋನ್ ಮಾಡಿ ಒಂದು ಸಾವಿರ ರೂಪಾಯಿ ಪೊನ್ ಪೇ ಮಾಡಿಸಿಕೊಂಡಿದ್ದಳು. ಹಣವನ್ನು ಪೊನ್ ಪೇ ಮಾಡಿಸಿಕೊಂಡು ಗಿರೀಶ್ ನಂಬರ್ ಬ್ಲಾಕ್ ಮಾಡಿದ್ದಳು ಎಂಬ ಮಾಹಿತಿ ತನಿಖೆಯಲ್ಲಿ ಸಿಕ್ಕಿದೆ. ಇದರಿಂದ ಸಿಟ್ಟಿಗೆದ್ದ ಗಿರೀಶ್ ಮೈಸೂರಿನಿಂದ ಹುಬ್ಬಳ್ಳಿಗೆ ಬಂದಿದ್ದು ಪ್ರೀತಿಸುತ್ತಿದ್ದಾಕೆಯ ಮೇಲಿನ ದ್ವೇಷದಿಂದ ಕೊಲೆಗೆ ಸ್ಕೆಚ್ ಹಾಕಿದ್ದ. ರಾತ್ರೋರಾತ್ರಿ ಮೈಸೂರಿನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಮನೆಗೆ ನುಗ್ಗಿ ಅಂಜಲಿಯನ್ನು ಕೊಲೆ ಮಾಡಿದ್ದ.
ಸಿಐಡಿ ಅಧಿಕಾರಿಗಳ ಮುಂದೆ ಈ ವಿಚಾರವನ್ನು ಗಿರೀಶ್ ಹೇಳಿಕೊಂಡಿದ್ದು ಕೇವಲ ಒಂದು ಸಾವಿರ ರೂಪಾಯಿಗಾಗಿ ಅಂಜಲಿ ಜೀವ ತೆಗೆದ್ನಾ ಎನ್ನುವ ಸಂಶಯ ಮೂಡಿದೆ. ಯಾವ ಕಾರಣಕ್ಕೆ ಹಣ ಹಾಕಿಸಿಕೊಂಡಿದ್ದಳು, ಅವರ ನಡುವಿನ ವ್ಯವಹಾರ ಏನಿತ್ತು, ಮನಸ್ತಾಪ ಕಾರಣಕ್ಕೆ ಫೋನ್ ಬ್ಲಾಕ್ ಮಾಡಿದ್ದಳೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಅಂಜಲಿ ಕೊಲೆಯಾಗಿ ಹತ್ತು ದಿನ ಕಳೆದರೂ ಪೊಲೀಸರಿಗೆ ಇನ್ನೂ ಕೊಲೆಗೆ ಬಳಸಿದ್ದ ಚಾಕು ಪತ್ತೆಯಾಗಿಲ್ಲ. ಹತ್ಯೆಯಾದ ಸ್ಥಳದ ಬಳಿ ಸುತ್ತಮುತ್ತ ಇಂಚಿಂಚು ಹುಡುಕಾಡಿದರೂ ಚಾಕು ಸಿಗದೇ ಇರುವುದರಿಂದ ಪೊಲೀಸರಿಗೆ ತಲೆನೋವಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಸಿಐಡಿ ಅಧಿಕಾರಿಗಳು ಕೊಲೆ ನಡೆದ ಸ್ಥಳದಿಂದ ಚರಂಡಿ ಸೇರಿ ರಸ್ತೆ ಆಸುಪಾಸಿನಲ್ಲಿ ಹುಡುಕಾಟ ಮಾಡಿದರೂ ಚಾಕು ಪತ್ತೆಯಾಗಿಲ್ಲ. ಚಾಕುವನ್ನು ಎಲ್ಲಿ ಎಸೆದಿದ್ದೇನೆ ಎಂಬ ಬಗ್ಗೆ ಆರೋಪಿ ಪೊಲೀಸರಿಗೆ ಸರಿಯಾದ ಮಾಹಿತಿ ನೀಡಿಲ್ಲ.
Hubballi Anjali murder case, Accused killed her over thousand rupees, shocking details revealed
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm