ಬ್ರೇಕಿಂಗ್ ನ್ಯೂಸ್
28-05-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 28: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಧಕ್ಕೆ, ಸರಣಿ ಹತ್ಯೆಗಳು, ಭ್ರಷ್ಟಾಚಾರ ಆರೋಪ ಹಾಗೂ ಅಭಿವೃದ್ಧಿ ವಿಚಾರವಾಗಿ ಹಿನ್ನಡೆಯನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಹೋರಾಟ ನಡೆಸಲಾಯಿತು.
ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಅಶ್ವತ್ಥ ನಾರಾಯಣ, ಡಿವಿ ಸದಾನಂದ ಗೌಡ, ಮುನಿರತ್ನ, ಬೈರತಿ ಬಸವರಾಜ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.



ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆದರೂ ಬ್ರ್ಯಾಂಡ್ ಬೆಂಗಳೂರಿಗೆ ಒಂದು ರೂಪಾಯಿ ಹಣ ನೀಡಿಲ್ಲ. ನಮ್ಮ ತೆರಿಗೆ ಎಂದು ನಮ್ಮ ಹಕ್ಕು ಎಂದು ಹೋರಾಟ ಮಾಡಿದರು. ಆದರೆ ಬೆಂಗಳೂರು ಜನರ ತೆರಿಗೆಯನ್ನು ಬೆಂಗಳೂರಿನ ಅಭಿವೃದ್ಧಿಗೆ ಬಳಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು
ಮಾಜಿ ಸಚಿವ ಮುನಿರತ್ನ ಮಾತನಾಡಿ, ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರಲಿಲ್ಲ ಹಾಗೂ ಹಣವೂ ಇಲ್ಲ. ಸರ್ಕಾರದಿಂದ ನಯಾ ಪೈಸೆ ಬಿಡುಗಡೆ ಆಗ್ತಿಲ್ಲ. ಟೆಕ್ ಪಾರ್ಕ್ ಗಳಲ್ಲಿ ಐಟಿಯವರು ಕೆಲಸ ಬಿಟ್ಟು ಹೈದರಾಬಾದ್ ಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನ ಶಾಸಕರ ಸಭೆ ಕರೆಯಲು ಸಾಧ್ಯವಾಗ್ತಿಲ್ಲ, ಯಾಕೆಂದರೆ ನಮ್ಮ ಪ್ರಶ್ನೆಗಳಿಗೆ ಅವರಲ್ಲಿ ಉತ್ತರ ಇಲ್ಲ ಎಂದರು.
ಗುತ್ತಿಗೆದಾರರು ನೇಣು ಹಾಕುವ ಪರಸ್ಥಿತಿ ನಿರ್ಮಾಣ ಆಗಿದೆ. ಮರ ಬಿದ್ದರು ಕಡಿದು ತೆರವು ಮಾಡಲು ಜನ ಸಿಗ್ತಿಲ್ಲ. ಬೆಂಗಳೂರು ಕಾಂಗ್ರೆಸ್ ಅಧಿಕಾರದ ಬೇರೆ ರಾಜ್ಯಗಳಿಗೆ ಎಟಿಎಂ ಆಗಿದೆ. ಬೆಂಗಳೂರಿನಲ್ಲಿ ಬರುವ ಅನುದಾನ ಗ್ಯಾರಂಟಿಗೆ ಬಳಕೆ ಮಾಡಲಾಗ್ತಿದೆ ಎಂದು ಆರೋಪಿಸಿದರು.
ಮಾಜಿ ಡಿಸಿಎಂ, ಡಾ ಅಶ್ವತ್ಥ ನಾರಾಯಣ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರನ್ನು ಕಡೆಗಣಿಸಿದೆ. ಕಾಂಗ್ರೆಸ್ ಸರ್ಕಾರದಲ್ಲಿ ರಕ್ತ ಹೀರಲಾಗ್ತಿದೆ. ಯಾವ ಗುತ್ತಿಗೆದಾರರು ಕೆಲಸ ಮಾಡಲು ಸಿದ್ದರಿಲ್ಲ. ಅಭಿವೃದ್ಧಿ ಕೆಲಸ ಶೂನ್ಯವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೂಡಾ ಸಂಪೂರ್ಣವಾಗಿ ಕುಸಿದಿದೆ ಎಂದು ವಾಗ್ದಾಳಿ ನಡೆಸಿದರು. ಸಿಎಂ ಹಾಗೂ ಡಿಸಿಎಂ ನಡುವಿನ ಜಗಳದಲ್ಲಿ ಬೆಂಗಳೂರು ಬಡವಾಗಿದೆ ಎಂದರು
ಸಂಸದ ಡಿವಿ ಸದಾನಂದ ಗೌಡರು ಮಾತನಾಡಿ, ಸರ್ಕಾರದ ಕಣ್ಣಿದ್ದೂ ಕುರುಡಾಗಿದೆ, ಕಿವಿ ಇದ್ದೂ ಕಿವುಡಾಗಿದೆ. ಮನೆಯಿಂದ ಹೊರಟ ಹೆಣ್ಣು ಮಗಳು, ಯುವಕ, ಹಿರಿಯರು ಮತ್ತೆ ಮನೆ ಸೇರುವ ಭರವಸೆ ಇಲ್ಲದಂತಾಗಿದೆ. ಅಧಿಕಾರಿಯ ಆತ್ಮಹತ್ಯೆ ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಸರ್ಕಾರಿ ಅಧಿಕಾರಿಗಳು ಆತಂಕದಿಂದ ದಿನ ದೂಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಗುಂಡಿ ಮುಚ್ಚದಿದ್ದರೆ,ಭ್ರಷ್ಟಾಚಾರ ನಿಲ್ಲಿಸದೇ ಇದ್ದರೆ ಉಗ್ರ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದರು.
The BHARATIYa Janata Party (BJP) on Monday launched a massive protest against the Congress government in the state, citing law and order problems, serial killings, corruption allegations and development issues. Opposition leader R Ashoka, Ashwath Narayan, DV Sadananda Gowda, Munirathna, Byrathi Basavaraj and others participated in the protest held at Freedom Park in the city.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm