ಬ್ರೇಕಿಂಗ್ ನ್ಯೂಸ್
29-05-24 04:14 pm HK News Desk ಕರ್ನಾಟಕ
ಶಿವಮೊಗ್ಗ, ಮೇ 29: ಪಕ್ಷದ ಅವ್ಯವಸ್ಥೆಗೆ ಸರಿಯಾದ ಉತ್ತರ ಸಿಗಬೇಕು ಎಂದು ಸ್ಪರ್ಧೆ ಮಾಡುತ್ತಿದ್ದೇನೆ. ಪಕ್ಷೇತರ ಅಭ್ಯರ್ಥಿಯಾಗಿ ಮೊದಲ ಬಾರಿಗೆ ಸ್ಪರ್ಧೆ ಮಾಡುತ್ತಿದ್ದೇನೆ. ನನ್ನ ಸ್ಪರ್ಧೆಯಿಂದ ವಿಧಾನ ಪರಿಷತ್ ಚುನಾವಣೆಯ ಕಾವು ಏರಿದೆ. ಚುನಾವಣೆಯ ನಂತರ ಹೊಸ ಮನ್ವಂತರ ಬರಲಿದೆ ಎಂದು ಪದವೀಧರ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿ ನಡೆಸಿದ ರಘುಪತಿ ಭಟ್, ಚುನಾವಣೆಗೆ ನಾಲ್ಕು ದಿನ ಉಳಿದಿದೆ. ಈಗಾಗಲೇ ಎಲ್ಲಾ ಜಿಲ್ಲೆ ಹಾಗೂ ಮತದಾರರನ್ನು ಭೇಟಿ ಮಾಡಿದ್ದೇನೆ. ಶಿವಮೊಗ್ಗದಲ್ಲಿ ಲೋಕಸಭೆ ಪ್ರಭಾರಿಯಾಗಿ 45 ದಿನ ಕೆಲಸ ಮಾಡಿದ್ದೇನೆ. ಎಲ್ಲಾ ಕಡೆ ಉತ್ತಮ ಬೆಂಬಲ ಸಿಗುತ್ತಿದೆ. ಅನೇಕ ಹಿರಿಯರು ಬೆಂಬಲ ನೀಡುತ್ತಿದ್ದಾರೆ.
ಈಶ್ವರಪ್ಪನವರ ಬೆಂಬಲದಿಂದ ಕಾರ್ಯಕರ್ತರ ಶಕ್ತಿ ಇಮ್ಮಡಿಯಾಗಿದೆ. ಭಂಡ ಧೈರ್ಯ ಮಾಡಿ ಸ್ಪರ್ಧೆ ಮಾಡುತ್ತಿದ್ದೇನೆ. ಕರಾವಳಿ ಜಿಲ್ಲೆಗಳ ಜೊತೆಗೆ ಮಲೆನಾಡು ಭಾಗದಲ್ಲೂ ಉತ್ತಮ ಬೆಂಬಲ ಸಿಗುತ್ತಿದೆ. ಈ ಮಟ್ಟದ ಬೆಂಬಲ ನೀರಿಕ್ಷೆ ಮಾಡಿರಲಿಲ್ಲ. ವಿಧಾನ ಪರಿಷತ್ ಸದಸ್ಯನಾದ ಮೇಲೆ ಮಲೆನಾಡನ್ನು ಸಹ ಜೊತೆಗೆ ತೆಗೆದುಕೊಂಡು ಹೋಗುತ್ತೇನೆ. ಬಿಜೆಪಿ ಕಾರ್ಯಕರ್ತರ ಗಟ್ಟಿ ಧ್ವನಿಯಾಗಿ ನಾನು ಇರ್ತೇನೆ. ಪರಿಷತ್ ಚುನಾವಣೆಯಲ್ಲಿ ನಾನೇ ಗೆಲುವು ಸಾಧಿಸುತ್ತೇನೆ.
ಮಲೆನಾಡಿನ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿಯಾಗುತ್ತೇನೆ. ಚನ್ನಗಿರಿಯಲ್ಲಿ ನಡೆದ ಘಟನೆಯನ್ನು ನೋಡಿ ಬಂದಿದ್ದೇನೆ. ಪೊಲೀಸ್ ಠಾಣೆ ನೋಡಿದರೆ ಭಾರತ ಎಲ್ಲಿ ಹೋಗುತ್ತಿದೆ ಎಂದು ಭಯ ಆಗುತ್ತಿದೆ. ಅಲ್ಲಿದ್ದ ವಾಹನಗಳನ್ನು ಜಖಂಗೊಳಿಸಿದ್ದಾರೆ. ನಮ್ಮನ್ನ ರಕ್ಷಿಸುವ ಹೊಣೆ ಹೊತ್ತ ಪೊಲೀಸರ ಮೇಲೆ ದಾಳಿ ಆಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಈ ರೀತಿಯ ಘಟನೆ ನಡೆಯುತ್ತಿದೆ.
ಬಿಜೆಪಿ ಕಾರ್ಯಕರ್ತರು ನಮ್ಮ ಕಾರ್ಯಕರ್ತರು. ಹಿಂದುತ್ವದ ಧ್ವನಿಯಾಗಲು ನಾನು ಸ್ಪರ್ಧಿಸುತ್ತಿದ್ದೇನೆ. ಲಾಬಿ ಮಾಡಿ ಬಕೆಟ್ ಹಿಡಿಯುತ್ತಿದ್ದರೆ ಟಿಕೆಟ್ ತರುತ್ತಿದ್ದೆ. ಆ ಕೆಲಸ ನಾನು ಮಾಡಿಲ್ಲ. ಯಾರು ಟಿಕೆಟ್ ನೀಡುತ್ತಾರೆ ಅನ್ನೋದು ನನಗೆ ಗೊತ್ತಿಲ್ಲ. ನಾನು ಗೆದ್ದ ನಂತರ ನನ್ನನ್ನು ಪಕ್ಷಕ್ಕೆ ಕರೆದುಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಜಗದೀಶ್ ಶೆಟ್ಟರ್ ಅವರನ್ನೇ ರತ್ನ ಕಂಬಳಿ ಹಾಕಿ ಲೋಕಸಭೆ ಟಿಕೆಟ್ ನೀಡಿದ್ದಾರೆ. ನನಗೆ ಅನ್ವಯ ಆಗಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
Udupi former MLA Raghupati Bhat says will show my results in Parishad elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm