ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm