ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm