ಬ್ರೇಕಿಂಗ್ ನ್ಯೂಸ್
30-05-24 10:27 am Bangalore Correspondent ಕರ್ನಾಟಕ
ಬೆಂಗಳೂರು, ಮೇ 30: ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬಂದರೆ ತಿಂಗಳಿಗೆ 8500 ರೂ. ಸಿಗುತ್ತದೆ ಎಂಬ ವದಂತಿ ನಂಬಿದ ಸಾವಿರಾರು ಮಹಿಳೆಯರು ಖಾತೆ ಮಾಡಿಸಲು ಬೆಂಗಳೂರಿನಲ್ಲಿ ಅಂಚೆ ಕಚೇರಿಗೆ ದಾಂಗುಡಿ ಇಡುತ್ತಿದ್ದಾರೆ. ಬೆಂಗಳೂರಿನಲ್ಲಿ ಭಾರೀ ಸಂಖ್ಯೆಯಲ್ಲಿ ಬುರ್ಖಾ ಹಾಕಿದ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದು ಅಂಚೆ ಕಚೇರಿ ಸಿಬಂದಿಗೆ ಸಮಸ್ಯೆ ಉಂಟು ಮಾಡಿದ್ದಾರೆ.
ಲೋಕಸಭೆ ಫಲಿತಾಂಶ ದಿನ ಹತ್ತಿರವಾಗುತ್ತಿದ್ದಂತೆ ಜನರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ. ಪೋಸ್ಟ್ ಆಫೀಸ್ ಎದುರಿನಲ್ಲಿ ದಿನದಿಂದ ದಿನಕ್ಕೆ ಜನಜಂಗುಳಿ ಹೆಚ್ಚಾಗುತ್ತಿದ್ದು, ಕಚೇರಿ ಎದುರು ಜಮಾಯಿಸಿದ ಜನರನ್ನು ನಿಭಾಯಿಸುವುದು ಸಿಬ್ಬಂದಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಖಾತೆ ಮಾಡಿಸುವ ಸಲುವಾಗಿ ಹೆಂಗಳೆಯರು ಬೆಳಗ್ಗೆ 6 ಗಂಟೆಯಿಂದಲೇ ಅಂಚೆ ಕಚೇರಿ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಜನಸಂದಣಿಯನ್ನು ನಿಭಾಯಿಸಲು ಮಹಿಳಾ ಪೊಲೀಸರು ಮತ್ತು ಅಂಚೆ ಕಚೇರಿಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬಾಯಿ ಮಾತು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ ಗಳನ್ನು ನಂಬಿ ಖಾತೆ ಮಾಡಿಸಲು ಬಂದಿರುವುದಾಗಿ ಮಹಿಳೆಯರು ಹೇಳಿದ್ದಾರೆ. ಸರ್ಕಾರ ಬಂದ ಕೂಡಲೇ ಹಣ ಬರುತ್ತದೆ ಎಂದು ಕ್ಯುನಲ್ಲಿ ನಿಂತವರು ಹೇಳುತ್ತಿದ್ದರು.
ಕೊನೆಗೆ, ಅಂಚೆ ಕಚೇರಿಯ ಹೊರಗಡೆ ಯಾವುದೇ ಹಣ ಪಾವತಿ ಮಾಡುವುದಿಲ್ಲ ಎಂದು ಬೋರ್ಡ್ ಹಾಕಿದರೂ, ಜನರು ಕೇಳಲಿಲ್ಲ. ನಾವು ಖಾತೆ ತೆರೆಯುತ್ತೇವೆ ಎಂದು ಪಟ್ಟು ಹಿಡಿದವರೂ ಇದ್ದರು. ದಿನದಲ್ಲಿ 500-600 ಮಂದಿ ಕ್ಯೂ ನಿಂತು ಖಾತೆ ತೆರೆಯುತ್ತಿದ್ದಾರೆ. ಕಾಂಗ್ರೆಸ್ ಶಾಸಕರು, ಕೇಂದ್ರದಲ್ಲಿ ನಮ್ಮ ಸರ್ಕಾರ ಬಂದ ಕೂಡಲೇ ನಿಮ್ಮ ಖಾತೆಗೆ ಹಣ ಬರುತ್ತದೆ ಎಂದು ಹೇಳಿದ್ದನ್ನು ನಂಬಿ ಬಂದಿದ್ದಾಗಿ ಕೆಲವರು ಹೇಳಿದ್ದಾರೆ. ಶಿವಾಜಿನಗರ, ಚಾಮರಾಜಪೇಟೆ ಆಸುಪಾಸಿನಲ್ಲಿ ಅತಿ ಹೆಚ್ಚು ಮಹಿಳೆಯರು ಅಂಚೆ ಕಚೇರಿ ಮುಂದೆ ಇಡೀ ದಿನ ಕ್ಯೂ ನಿಂತಿದ್ದಾರೆ.
ರಾಜ್ಯದಲ್ಲಿ ಗೃಹಲಕ್ಷ್ಮಿ ಇದ್ದಂತೆ ಕೇಂದ್ರದಲ್ಲಿ ಅದೇ ಮಾದರಿಯ ಯೋಜನೆ ತರುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತ ಬಂದಿದ್ದಾರೆ. ಹೀಗಾಗಿ ಫಲಿತಾಂಶಕ್ಕೆ ನಾಲ್ಕು ದಿನ ಇರುವಾಗಲೇ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆಯಲು ಮುಂದಾಗಿದ್ದಾರೆ.
An otherwise silent General Post Office in the city is witnessing an unprecedented rush of women hurrying to open India Post Payment Bank accounts, anticipating a monthly deposit of Rs 8,500 into their accounts if the I.N.D.I.A. bloc comes to power at the Centre.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm