ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
25-02-25 10:30 pm
Bangalore Correspondent
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 10:58 pm
Mangalore Correspondent
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm