ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm