ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm