ಬ್ರೇಕಿಂಗ್ ನ್ಯೂಸ್
30-05-24 06:41 pm HK News Desk ಕರ್ನಾಟಕ
ಮೈಸೂರು, ಮೇ.30: ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗಲೇ ಮಹಿಳಾ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ನಗರದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆಯುವಾಗ ಸಬ್ ಇನ್ಸ್ಪೆಕ್ಟರ್ ರಾಧಾ ಸಿಕ್ಕಿಬಿದ್ದಿದ್ದಾರೆ. ರಾಧಾ ಅವರನ್ನ ವಶಕ್ಕೆ ಪಡೆದು ತನಿಖೆ ಕೈಗೊಂಡಿರುವುದಾಗಿ ಲೋಕಾಯುಕ್ತ ಅಧೀಕ್ಷಕರು ತಿಳಿಸಿದ್ದಾರೆ. ಮೈಸೂರಿನ ಕೆ ಆರ್ ಮೊಹಲ್ಲಾ ನಿವಾಸಿಯಾದ ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಎಂಬುವರು ಮೇ 13 ರಂದು ಮೈಸೂರು ಲೋಕಾಯುಕ್ತ ಠಾಣೆಗೆ ಹಾಜರಾಗಿ ನೀಡಿದ ದೂರಿನ ಆಧಾರದ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು.
ಕುವೆಂಪು ನಗರದ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ತಮಗೆ ಸೇರಿದ ಚಿನ್ನಾಭರಣ, ಆಸ್ತಿ, ಬ್ಯಾಂಕ್ ಪಾಸ್ ಬುಕ್, ಲಾಕರ್ ಕೀ, ಕಾರ್ ಸೇರಿದಂತೆ ಇತರ ಸೊತ್ತನ್ನು ಕುವೆಂಪುನಗರದ ಮಹಿಳಾ ಸಬ್ ಇನ್ಸ್ಪೆಕ್ಟರ್ ರಾಧಾ ವಶಕ್ಕೆ ಪಡೆದುಕೊಂಡಿದ್ದರು. ಈ ವಸ್ತುಗಳನ್ನ ವಾಪಸ್ ಕೊಡಲು ಎರಡು ಲಕ್ಷ ಹಣ ನೀಡುವಂತೆ ಸಬ್ ಇನ್ಸ್ಪೆಕ್ಟರ್ ಬೇಡಿಕೆ ಇಟ್ಟಿದ್ದರು ಎಂದು ಸಿವಿಲ್ ಕಾಂಟ್ರಾಕ್ಟರ್ ಮಹೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಕಾರ್ಯಾಚರಣೆ ಕೈಗೊಂಡಾಗ ಪೊಲೀಸ್ ಠಾಣೆಯಲ್ಲಿ ಮಹೇಶ್ ಅವರಿಂದ ಸಬ್ ಇನ್ಸ್ಪೆಕ್ಟರ್ ರಾಧಾ 50 ಸಾವಿರ ರೂ. ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಈ ಕುರಿತು ತನಿಖೆ ಕೈಗೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪೊಲೀಸ್ ಮಹಾನಿರ್ದೇಶಕರಾದ ಪ್ರಶಾಂತ್ ಕುಮಾರ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕರಾದ ಸುಬ್ರಹ್ಮಣ್ಣೇಶ್ವರರಾವ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧೀಕ್ಷಕರಾದ ಸಜೀತ್ ವಿ.ಜೆ ಅವರ ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಇಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
Mysuru police inspector Radha arrested by Lokayukta while accepting bribe of 1 lakh. Radha was a Sub Inspector of police working at Kuvempunagara.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm