ಬ್ರೇಕಿಂಗ್ ನ್ಯೂಸ್
04-12-20 02:52 pm Headline Karnataka News Network ಕರ್ನಾಟಕ
ಶಿವಮೊಗ್ಗ ಡಿ.4: ನಿನ್ನೆ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಮಂದಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್ .ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲಸುತ್ತಿದೆ ಎಂದು ಹೇಳಿದರು.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.

ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು 3 ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ ನೆಲೆಸಲು ಸಾರ್ವಜನಿಕರು ಪೊಲೀಸ್ ರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಇದ್ದು.
Commual Voilence in Shivamogga 62 persons have been arrested so far. Also Prohibitory orders has been imposed to be in force from Thursday, December 3 till Saturday, December 5
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm