ಬ್ರೇಕಿಂಗ್ ನ್ಯೂಸ್
04-12-20 02:52 pm Headline Karnataka News Network ಕರ್ನಾಟಕ
ಶಿವಮೊಗ್ಗ ಡಿ.4: ನಿನ್ನೆ ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಮಂದಿಯನ್ನು ಬಂಧಿಸಲಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್ .ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಸಂಪೂರ್ಣ ಹತೋಟಿಗೆ ಬಂದಿದೆ. ಶಾಂತಿ ನೆಲಸುತ್ತಿದೆ ಎಂದು ಹೇಳಿದರು.
ಘಟನೆಯಲ್ಲಿ 19 ಮಂದಿ ಗಾಯಗೊಂಡಿದ್ದಾರೆ. ದೊಡ್ಡಪೇಟೆ ಮತ್ತು ಕೋಟೆಠಾಣೆ ವ್ಯಾಪ್ತಿಯಲ್ಲಿ 10 ಪ್ರಕರಣಗಳು ದಾಖಲಾಗಿವೆ. ನಾಗೇಶ್ ಹಲ್ಲೆ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.

ಈಗಾಗಲೇ 148 ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಬೇರೆ ಜಿಲ್ಲೆಗಳಿಂದ ಬರುವ ದುಷ್ಕರ್ಮಿಗಳನ್ನು ತಡೆಯಲು 9 ಕಡೆ ಚೆಕ್ ಪೋಸ್ಟ್ ಹಾಕಲಾಗಿದೆ.19 ಮೊಬೈಲ್ ಗಸ್ತು ವಾಹನ ಹಾಗೂ 22 ಚಿತಾ ವಾಹನಗಳು ನಗರದಾದ್ಯಂತ ಗಸ್ತು ತಿರುಗುತ್ತಿವೆ ಎಂದ ಅವರು 3 ಪ್ಯಾಟ್ರೋಲ್ ವಾಹನ ಗಸ್ತು ತಿರುಗುತ್ತಿವೆ. ನಗರದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ದಾವಣಗೆರೆ ವಲಯದ 1 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ ಎಂದ ಅವರು, ಪರಿಸ್ಥಿತಿ ಬಿಗಡಾಯಿಸದಂತೆ ಪೊಲೀಸ್ ಇಲಾಖೆ ನೋಡಿಕೊಳ್ಳುತ್ತದೆ. ನಗರದಲ್ಲಿ ಶಾಂತಿ ನೆಲೆಸಲು ಸಾರ್ವಜನಿಕರು ಪೊಲೀಸ್ ರೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಡಿ.5 ರವರೆಗೆ ಕರ್ಪ್ಯೂ ಜಾರಿಯಲ್ಲಿರಲಿದೆ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡಬೇಡಿ. ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವತ್ಯಯ ಆಗುವುದಿಲ್ಲ ಎಂದರು. ಪತ್ರಿಕಾಗೋಷ್ಠಿಯಲ್ಲಿ ಎಸ್ ಪಿ ಕೆ.ಎಂ ಶಾಂತರಾಜು ಇದ್ದು.
Commual Voilence in Shivamogga 62 persons have been arrested so far. Also Prohibitory orders has been imposed to be in force from Thursday, December 3 till Saturday, December 5
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:14 pm
HK News Staffer
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm