ಬ್ರೇಕಿಂಗ್ ನ್ಯೂಸ್
01-06-24 11:08 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 1: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪ ಎದುರಿಸುತ್ತಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಮತ್ತು ನಿಗಮದ ಲೆಕ್ಕಾಧಿಕಾರಿ ಪರಶುರಾಮ್ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದ್ದು, ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಚಂದ್ರಶೇಖರ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್ನೋಟ್ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ್ ಬರೆದಿದ್ದರು. ಅಲ್ಲದೆ, ಇಬ್ಬರು ಅಧಿಕಾರಿಗಳ ಹೆಸರನ್ನೂ ಬರೆದಿದ್ದರು.
ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದ್ದು, ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ. ಹೀಗಾಗಿ ಸಿಬಿಐ ಅಧಿಕಾರಿಗಳೂ ತನಿಖೆ ನಡೆಸುವ ಸಾಧ್ಯತೆಯಿದೆ. ನೂರು ಕೋಟಿಗೂ ಹೆಚ್ಚು ಅವ್ಯವಹಾರ ಆಗಿದ್ದರೆ, ಸಹಜವಾಗಿಯೇ ಪ್ರಕರಣ ಸಿಬಿಐಗೆ ಹೋಗಲಿದೆ. ಆದರೆ ರಾಜ್ಯ ಸರ್ಕಾರ ಸಿಬಿಐಗೆ ವಹಿಸುವ ಪ್ರಶ್ನೆ ಇಲ್ಲ, ನಾವೇ ಎಸ್ಐಟಿ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಇದೇ ವೇಳೆ, ಎಸ್ಐಟಿ ತನಿಖೆಯಲ್ಲಿ ಸಚಿವ ನಾಗೇಂದ್ರ ಹೆಸರು ಪ್ರಸ್ತಾಪವಾದರೆ ರಾಜಿನಾಮೆ ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ ಎನ್ನಲಾಗಿದೆ. ಬಂಧಿತ ಅಧಿಕಾರಿಗಳು ಬಾಯಿ ಬಿಟ್ಟರೆ ಬಹುತೇಕ ನಾಗೇಂದ್ರ ಚಾಪ್ಟರ್ ಕ್ಲೋಸ್ ಆಗಲಿದೆ.
The Special Investigation Team (SIT) probing the Valmiki Development Corporation (VDC) scam has taken into custody its managing director Padmanabha and corporation's accounts officer Parashuram.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm