ಬ್ರೇಕಿಂಗ್ ನ್ಯೂಸ್
04-06-24 11:39 am Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.
ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Election result, Dr Manjunath leading, DK Suresh faces heavy shock, police security tightened at Bangalore rural. BJP’s Dr CN Manjunath Leading By 72,000 Votes Against DK Suresh In Bengaluru Rural Constituency
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm