ಬ್ರೇಕಿಂಗ್ ನ್ಯೂಸ್
04-06-24 11:39 am Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.
ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Election result, Dr Manjunath leading, DK Suresh faces heavy shock, police security tightened at Bangalore rural. BJP’s Dr CN Manjunath Leading By 72,000 Votes Against DK Suresh In Bengaluru Rural Constituency
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 10:21 pm
HK News Staffer
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am