ಬ್ರೇಕಿಂಗ್ ನ್ಯೂಸ್
04-06-24 11:39 am Bangalore Correspondent ಕರ್ನಾಟಕ
ಬೆಂಗಳೂರು, ಜೂ 04: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರಿಗೆ ಬಿಗ್ ಶಾಕ್ ಎದುರಾಗಿದೆ. ಮತಎಣಿಕೆಯ ಆರಂಭದಿಂದಲೂ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮತಗಳ ಅಂತರದಲ್ಲಿ ಮುನ್ನುಗ್ಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಸದ್ಯದ ಮಾಹಿತಿ ಪ್ರಕಾರ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ ಅವರು 1 ಲಕ್ಷ 24 ಸಾವಿರದ 943 ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರ ಗೆಲುವು ಬಹುತೇಕ ಪಕ್ಕಾ ಎನ್ನಲಾಗಿದೆ. ಡಾ.ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಈಗಾಗಲೇ ಸಂಭ್ರಮಾಚರಣೆ ಶುರುವಾಗಿದೆ.
ಪ್ರತಿ ಸುತ್ತಿನಲ್ಲೂ ಅಂತರ ಹೆಚ್ಚಿಸಿಕೊಂಡ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ತಮ್ಮ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ. ಕನಕಪುರ ಹೊರತುಪಡಿಸಿ ಉಳಿದ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಅಭ್ಯರ್ಥಿ ಮಂಜುನಾಥ್ ಅವರಿಗೆ 7 ವಿಧಾನಸಭಾ ಕ್ಷೇತ್ರಗಳಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕೇವಲ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಮುನ್ನಡೆ ಸಾಧಿಸಿದ್ದಾರೆ.
ಲೋಕಸಭಾ ಕ್ಷೇತ್ರದಲ್ಲಿ ಹಿನ್ನೆಡೆಯ ಸುಳಿವು ಸಿಗುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರು ಕಂಗಾಲಾಗಿದ್ದಾರೆ. ಕಾಂಗ್ರೆಸ್ ಮುಖಂಡರ ಜೊತೆ ಡಿ.ಕೆ ಸುರೇಶ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಮನೆಗೆ ತೆರಳಿ ಚರ್ಚಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆ ಮುಖ್ಯಸ್ಥರಾಗಿದ್ದ ಡಾ. ಮಂಜುನಾಥ್ ನಿವೃತ್ತಿ ಪಡೆದು ರಾಜಕೀಯಕ್ಕೆ ಬಂದಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಇದೀಗ ಡಿ.ಕೆ. ಸುರೇಶ್ ವಿರುದ್ಧ ಡಾ. ಮಂಜುನಾಥ್ ದೊಡ್ಡ ಮಟ್ಟದ ಮುನ್ನಡೆ ಕಾಯ್ದುಕೊಂಡಿದ್ದಾರೆ.
Election result, Dr Manjunath leading, DK Suresh faces heavy shock, police security tightened at Bangalore rural. BJP’s Dr CN Manjunath Leading By 72,000 Votes Against DK Suresh In Bengaluru Rural Constituency
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm