ಬ್ರೇಕಿಂಗ್ ನ್ಯೂಸ್
04-06-24 04:13 pm Bangalore Correspondent ಕರ್ನಾಟಕ
ಬೆಂಗಳೂರು, ಜೂ.04: ಈ ಬಾರಿ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ 3 ಬಾರಿ ಸಂಸದರಾಗಿದ್ದ ಡಿಕೆ ಸುರೇಶ್ ವಿರುದ್ಧ ಸ್ಪರ್ಧೆಗಿಳಿದಿದ್ದ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಜನ ಬದಲಾಣೆ ಬಯಸಿದ್ದಾರೆ. ಜಯದೇವ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಿ ಲಕ್ಷಾಂತರ ಜನರ ಹೃದಯ ಗೆದ್ದ ಡಾ. ಮಂಜುನಾಥ್, ಡಿಕೆ ಸುರೇಶ್ ವಿರುದ್ಧ ಭಾರೀ ಅಂತರದಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಗೆಲುವಿನ ನಿರೀಕ್ಷೆಯಲ್ಲಿದ್ದ ಡಿಕೆ ಸುರೇಶ್, ಫಲಿತಾಂಶ ಕಂಡು ಬೇಸರದಿಂದ ಡಿಕೆಶಿ ಮನೆಯಿಂದ ಹೊರನಡೆದಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ಮೂರು ಬಾರಿ ಸಂಸದನಾಗಿ ಕೆಲಸ ಮಾಡಲು ಅವಕಾಶ ಕೊಟ್ಟಿದ್ದೀರಿ. ಆದ್ರೆ ನಾಲ್ಕನೇ ಬಾರಿ ಅಗ್ನಿಪರೀಕ್ಷೆಯಲ್ಲಿ ವಿರಾಮ ಕೊಟ್ಟಿದ್ದೀರಿ, ಕ್ಷೇತ್ರದ ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೇಸರದ ಮಾತುಗಳನ್ನು ಹಾಡಿದ್ರು.
ಡಾ. ಮಂಜುನಾಥ್ ಗೆಲುವು ಖಚಿತವಾಗ್ತಿದ್ದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ಮತದಾರ ಪ್ರಭುಗಳು ಕೊಟ್ಟಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಗೆಲುವು ಸಾಧಿಸಿದ ಡಾ. ಮಂಜುನಾಥ್ ಅವರಿಗೆ ಅಭಿನಂದನೆ ಹೇಳುತ್ತೇನೆ. ನನಗೆ ಅವಕಾಶ ಕೊಟ್ಟ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ರಾಹುಲ್ ಗಾಂಧಿಯವರಿಗೆ ಹಾಗೂ ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸುತ್ತೇನೆ ಎಂದು ಎಲ್ಲರಿಗೂ ಧನ್ಯವಾದ ತಿಳಿಸಿದ್ರು.
ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಬೇಕು. ನಾನು ಸೋಲನ್ನು ಸ್ವೀಕರಿಸಿದ್ದೇನೆ. ಗೆಲ್ಲುವ ವಿಶ್ವಾಶ ಇತ್ತು. ಆದ್ರೆ ಮತದಾರರ ತೀರ್ಮಾನ ಬೇರೆ ಆಗಿದೆ. ಕ್ಷೇತ್ರಕ್ಕೆ ಕಾಲಿಟ್ಟ ಹೊಸಬರು ಚೆನ್ನಾಗಿ ಕೆಲಸ ಮಾಡಲಿ. ಕ್ಷೇತ್ರಕ್ಕೆ ಒಳ್ಳೆಯದಾಗಲಿ. ಕಾರ್ಯಕರ್ತರಿಗೆ ನಾನು ಸದಾ ಜೊತೆಯಾಗಿರುತ್ತೇನೆ ಎಂದು ಡಿಕೆ ಸುರೇಶ್ ಹೇಳಿದ್ರು.
DK Suresh looses election in Bangalore rural, says I have accepted defeat against Dr Manjunath.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm