ಬ್ರೇಕಿಂಗ್ ನ್ಯೂಸ್
04-06-24 09:05 pm Bengaluru Correspondent ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 04: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಕಾಂಗ್ರೆಸ್ ಶಾಸಕ ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಖಚಿತವಾಗಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿಗಿಂತ ಡಾ. ಸುಧಾಕರ್ 1 ಮತ ಹೆಚ್ಚಿಗೆ ಪಡೆದರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಘಂಟಾ ಘೋಷವಾಗಿ ಹೇಳಿದ್ದರು
ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಪ್ರದೀಪ್ ಈಶ್ವರ್ ಮಾತನಾಡಿದ್ದ ವಿಡಿಯೋ ತುಣುಕನ್ನು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ಇನ್ನು ಕೆಲವೇ ಗಂಟೆಗಳಲ್ಲಿ ಶಾಸಕ ಪ್ರದೀಪ್ ಈಶ್ವರ್ ರಾಜಿನಾಮೆ ನೀಡಲಿದ್ದಾರೆ ಎಂದು ಟ್ವೀಟ್ ಮಾಡಿ ಕಾಲೆಳೆದಿದ್ದಾರೆ.
Sudhakar Wins Seat by 77468 Votes in Chikkballapur, Prathap simha says pradeep eshwar will resign after he had stated in assembly elections that if sudhakar gets even one vote I will resign
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 04:30 pm
Giridhar Shetty, ಗಿರಿಧರ್ ಶೆಟ್ಟಿ
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm