ಬ್ರೇಕಿಂಗ್ ನ್ಯೂಸ್
05-06-24 10:36 am HK News Desk ಕರ್ನಾಟಕ
ಚಿಕ್ಕಬಳ್ಳಾಫುರ, ಜೂ 05: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಡಾ.ಕೆ ಸುಧಾಕರ್ ಗೆಲುವು ಪಡೆದ ಹಿನ್ನೆಲೆಯಲ್ಲಿ ಶಾಸಕರ ಮನೆ ಮೇಲೆ ಕಲ್ಲು ತೂರಾಟ ಮಾಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಅವರ ನಿವಾಸ ನಗರದ ಕಂದವಾರದಲ್ಲಿದೆ. ಯಾರೋ ಕಿಡಿಗೇಡಿಗಳು ರಾತ್ರಿ ವೇಳೆ ಬಂದು ಮನೆ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ. ಇದರಿಂದ ಶಾಸಕರ ಮನೆಯ ಕಿಟಕಿಗಳ ಗಾಜುಗಳು ಒಡೆದು ಹೋಗಿವೆ.
ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಶಾಸಕರ ನಿವಾಸದ ಬಳಿ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಘಟನೆ ನಡೆದಿದೆ.
ನಿನ್ನೆ ಇಡೀ ದೇಶದ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದ್ದು ಕರ್ನಾಟಕದಲ್ಲಿ ಬಿಜೆಪಿ 17 ಸ್ಥಾನಗಳನ್ನು ಗೆದ್ದರೇ ಜೆಡಿಎಸ್ 2 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೂಡ 9 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಪಡೆದಿದೆ. ಇದರಲ್ಲಿ ಚಿಕ್ಕಬಳ್ಳಾಪುರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಡಾ.ಕೆ ಸುಧಾಕರ್ 95 ಸಾವಿರ ಮತಗಳಿಂದ ಭರ್ಜರಿ ಗೆಲುವು ಪಡೆದಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಮನೆಯ ಮೇಲೆ ಕಲ್ಲು ತೂರಾಟ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.
ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆ ನೀಡ್ತಾರಾ ಎಂಬ ಪ್ರಶ್ನೆಗಳು ಸೃಷ್ಟಿಯಾಗಿವೆ. ಯಾಕೆಂದರೆ ಸ್ವತಃ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಅದು ಈಗ ಮತ್ತೆ ಮುನ್ನೆಲೆಗೆ ಬಂದಿದೆ.
ಅದಲ್ಲದೇ ಬಿಜೆಪಿ ನಾಯಕ ಪ್ರತಾಪ್ ಸಿಂಹ ಕೂಡ ಶೀಘ್ರದಲ್ಲೇ ಪ್ರದೀಪ್ ಈಶ್ವರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರು ಮಾತನಾಡಿರುವ ವಿಡಿಯೋ ತುಣುಕನ್ನು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಡಾ ಕೆ ಸುಧಾಕರ್ ಅವರು ಒಂದು ಮತದ ಮುನ್ನಡೆಯನ್ನು ಪಡೆದರು ಕೂಡ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದ್ದರು.
Chikkaballapur Miscreants pelt stone on MLA pradeep eshwar house after Dr Sudhakar major victory in lok sabha elections 2024.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm