ಬ್ರೇಕಿಂಗ್ ನ್ಯೂಸ್
04-12-20 06:12 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.4 : ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಬೆಂಬಲಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಪೊಲೀಸರನ್ನು ರಾಜಧಾನಿಯಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಹೆಚ್ಚುವರಿ ಕಮಿಷನರ್ ದರ್ಜೆಯ ಅಧಿಕಾರಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.

ಇನ್ನು ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ನ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸಲಿದೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು. ಯಾರು ಕೂಡ ಪ್ರತಿಭಟನೆಗೆ ಹಾಗೂ ಮೆರವಣಿಗೆಗೆ ಅನುಮತಿ ಕೋರಿಲ್ಲ. ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Bandh Over 15,000 police personnel will be deployed across the city to watch out for protests said Bangalore Commission, Kamal Pant.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm