ಬ್ರೇಕಿಂಗ್ ನ್ಯೂಸ್
04-12-20 06:12 pm Headline Karnataka News Network ಕರ್ನಾಟಕ
ಬೆಂಗಳೂರು, ಡಿ.4 : ಮರಾಠ ಅಭಿವೃದ್ಧಿ ನಿಗಮವನ್ನು ರಚಿಸುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್ ಬೆಂಬಲಿಸಿವೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು ಮುನ್ನೆಚ್ಚರಿಕಾ ಕ್ರಮವಾಗಿ 15 ಸಾವಿರ ಪೊಲೀಸರನ್ನು ರಾಜಧಾನಿಯಲ್ಲಿ ನಿಯೋಜಿಸಲಾಗಿದೆ.
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಹೀಗಾಗಿ, 15 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನಾಳೆ ಬೆಳಗ್ಗೆಯಿಂದ ಪೊಲೀಸರು ಎಲ್ಲಾ ಕಡೆ ಗಸ್ತು ತಿರುಗಲಿದ್ದಾರೆ. 5 ಜನ ಹೆಚ್ಚುವರಿ ಕಮಿಷನರ್ ದರ್ಜೆಯ ಅಧಿಕಾರಿಗಳು, ಡಿಸಿಪಿಗಳು, ಎಸಿಪಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಲಿದೆ. ಇದುವರೆಗೂ ಬೆಂಗಳೂರಿನಲ್ಲಿ ಕರ್ನಾಟಕ ಬಂದ್ಗೆ ಯಾರೂ ನಮ್ಮ ಬಳಿ ಅನುಮತಿ ಕೇಳಿಲ್ಲ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.


ಮುಂಜಾಗ್ರತಾ ಕ್ರಮವಾಗಿ 35 ಕೆಎಸ್ಆರ್ಪಿ, 32 ಸಿಎಆರ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ನಾಳೆ ಯಾವುದೇ ರ್ಯಾಲಿಗೂ ಅವಕಾಶ ನೀಡುವುದಿಲ್ಲ. ಕರ್ನಾಟಕ ಬಂದ್ಗೆ ಬಿಎಂಟಿಸಿ, ಕೆಎಸ್ಆರ್ಟಿಸಿ ಬೆಂಬಲ ಸೂಚಿಸಿಲ್ಲ. ಹೀಗಾಗಿ, ಆ ಬಸ್ಗಳನ್ನು ತಡೆಯುವ ಹಾಗೆ ಇಲ್ಲ. ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ಮಾಮೂಲಿನಂತೆ ಸಂಚರಿಸಲಿವೆ ಎಂದಿದ್ದಾರೆ.

ಇನ್ನು ಆಯಾ ವಿಭಾಗದ ಡಿಸಿಪಿಗಳಿಗೆ ಬಂದ್ನ ನಿರ್ವಹಣೆಯ ಹೊಣೆ ವಹಿಸಲಾಗಿದೆ. 300 ಪೊಲೀಸ್ ವ್ಯಾನ್ಗಳು ನಗರದಾದ್ಯಂತ ವಿಶೇಷ ಗಸ್ತು ನಡೆಸಲಿದೆ. ಯಾರೂ ಕೂಡ ಭಯ ಪಡುವ ಅಗತ್ಯ ಇಲ್ಲ. ಜನರು ಎಂದಿನಂತೆ ತಮ್ಮ ಚಟುವಟಿಕೆಗಳನ್ನು ಮಾಡಿಕೊಳ್ಳಬೇಕು. ಯಾರು ಕೂಡ ಪ್ರತಿಭಟನೆಗೆ ಹಾಗೂ ಮೆರವಣಿಗೆಗೆ ಅನುಮತಿ ಕೋರಿಲ್ಲ. ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.
Karnataka Bandh Over 15,000 police personnel will be deployed across the city to watch out for protests said Bangalore Commission, Kamal Pant.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm