ಬ್ರೇಕಿಂಗ್ ನ್ಯೂಸ್
05-06-24 05:48 pm HK News Desk ಕರ್ನಾಟಕ
ಬೀದರ್, ಜೂನ್ 5: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲುಣಿಸಿ ಸಂಸತ್ಗೆ ಪ್ರವೇಶಿಸಿರುವ ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಪುತ್ರ 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಕಿರಿಯ ಸಂಸದರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಪುತ್ರ ಸಾಗರ್ 26 ವರ್ಷದ ಯುವಕನಾಗಿದ್ದು, ಬಿಬಿಎ- ಎಲ್ಎಲ್ಬಿ ಪದವೀಧರ. ರಾಜಕೀಯ ಕಣಕ್ಕಿಳಿದು ಮೊದಲ ಸ್ಪರ್ಧೆಯಲ್ಲೇ ಗೆಲುವಿನ ನಗೆ ಬೀರಿದ್ದಾರೆ. 2019ರ ಚುನಾವಣೆಯಲ್ಲಿ ಬೀದರಿನಲ್ಲಿ ತನ್ನ ತಂದೆಯನ್ನು ಸೋಲಿಸಿದ್ದ ಖೂಬಾ ವಿರುದ್ಧ ಕಳೆದ ಸಲಕ್ಕಿಂತ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಆಮೂಲಕ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 1,28,875 ಮತಗಳ ಅಂತರದಿಂದ ಗೆಲುವು ಕಂಡ ಸಾಗರ ಖಂಡ್ರೆ 6,66317 ಮತ ಪಡೆದಿದ್ದರು. ಎರಡು ಬಾರಿಯ ಬಿಜೆಪಿ ಸಂಸದ ಭಗವಂತ ಖೂಬಾ 5,37442 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಈಶ್ವರ್ ಖಂಡ್ರೆ ಅವರನ್ನು 1,16834 ಮತಗಳಿಂದ ಸೋಲಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಎನ್.ಧರ್ಮ ಸಿಂಗ್ ಅವರನ್ನು 92192 ಮತಗಳಿಂದ ಸೋಲಿಸಿದ್ದರು.
ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಮುಂಚೂಣಿ ನಾಯಕರಾಗಿ, ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ಸಾಗರ್, ತಮ್ಮ ತಂದೆ ಈಶ್ವರ್ ಖಂಡ್ರೆಯವರ ಗರಡಿಯಲ್ಲಿ ಹೆಜ್ಜೆಯಿಟ್ಟವರು. ಸಾಗರ್ ಅವರ ತಾತ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರು ಸಹ ಕಾಂಗ್ರೆಸ್ನಲ್ಲಿ ಸಚಿವರಾಗಿದ್ದರು.
Sagar Khandre, the 26-year-old Congress candidate fighting the elections for the first time, has won the Bidar seat by defeating the union minister Bhagwant Khuba by a margin of 1.29 lakh votes.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm