ಬ್ರೇಕಿಂಗ್ ನ್ಯೂಸ್
05-06-24 05:48 pm HK News Desk ಕರ್ನಾಟಕ
ಬೀದರ್, ಜೂನ್ 5: ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸೋಲುಣಿಸಿ ಸಂಸತ್ಗೆ ಪ್ರವೇಶಿಸಿರುವ ಬೀದರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಪುತ್ರ 26 ವರ್ಷದ ಸಾಗರ್ ಖಂಡ್ರೆ ದೇಶದ ಅತಿ ಕಿರಿಯ ಸಂಸದರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅರಣ್ಯ ಸಚಿವ ಈಶ್ವರ ಖಂಡ್ರೆಯವರ ಪುತ್ರ ಸಾಗರ್ 26 ವರ್ಷದ ಯುವಕನಾಗಿದ್ದು, ಬಿಬಿಎ- ಎಲ್ಎಲ್ಬಿ ಪದವೀಧರ. ರಾಜಕೀಯ ಕಣಕ್ಕಿಳಿದು ಮೊದಲ ಸ್ಪರ್ಧೆಯಲ್ಲೇ ಗೆಲುವಿನ ನಗೆ ಬೀರಿದ್ದಾರೆ. 2019ರ ಚುನಾವಣೆಯಲ್ಲಿ ಬೀದರಿನಲ್ಲಿ ತನ್ನ ತಂದೆಯನ್ನು ಸೋಲಿಸಿದ್ದ ಖೂಬಾ ವಿರುದ್ಧ ಕಳೆದ ಸಲಕ್ಕಿಂತ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ. ಆಮೂಲಕ ತಂದೆಯ ಸೋಲಿಗೆ ಸೇಡು ತೀರಿಸಿಕೊಂಡಿದ್ದಾರೆ. 1,28,875 ಮತಗಳ ಅಂತರದಿಂದ ಗೆಲುವು ಕಂಡ ಸಾಗರ ಖಂಡ್ರೆ 6,66317 ಮತ ಪಡೆದಿದ್ದರು. ಎರಡು ಬಾರಿಯ ಬಿಜೆಪಿ ಸಂಸದ ಭಗವಂತ ಖೂಬಾ 5,37442 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಎದುರಾಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಈಶ್ವರ್ ಖಂಡ್ರೆ ಅವರನ್ನು 1,16834 ಮತಗಳಿಂದ ಸೋಲಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲಿ ಭಗವಂತ ಖೂಬಾ ಅವರು ಮಾಜಿ ಮುಖ್ಯಮಂತ್ರಿ ಎನ್.ಧರ್ಮ ಸಿಂಗ್ ಅವರನ್ನು 92192 ಮತಗಳಿಂದ ಸೋಲಿಸಿದ್ದರು.
ರಾಜ್ಯ ಯುವ ಕಾಂಗ್ರೆಸ್ ಘಟಕದಲ್ಲಿ ಮುಂಚೂಣಿ ನಾಯಕರಾಗಿ, ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿರುವ ಸಾಗರ್, ತಮ್ಮ ತಂದೆ ಈಶ್ವರ್ ಖಂಡ್ರೆಯವರ ಗರಡಿಯಲ್ಲಿ ಹೆಜ್ಜೆಯಿಟ್ಟವರು. ಸಾಗರ್ ಅವರ ತಾತ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ಅವರು ಸಹ ಕಾಂಗ್ರೆಸ್ನಲ್ಲಿ ಸಚಿವರಾಗಿದ್ದರು.
Sagar Khandre, the 26-year-old Congress candidate fighting the elections for the first time, has won the Bidar seat by defeating the union minister Bhagwant Khuba by a margin of 1.29 lakh votes.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 11:46 am
HK News Staffer
ಸುರತ್ಕಲ್ ನಿಂದ 33 ನಾಟಿಕಲ್ ಮೈಲು ದೂರದಲ್ಲಿ ಅಪಾಯಕ್...
30-06-26 11:39 am
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
01-07-26 08:59 am
HK News Staffer
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm