ಬ್ರೇಕಿಂಗ್ ನ್ಯೂಸ್
06-06-24 05:26 pm HK News Desk ಕರ್ನಾಟಕ
ಮೈಸೂರು, ಜೂನ್.6: ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ದಾಖಲಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು ಕಂಡಿದ್ದಾರೆ.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರವಾಗಿ 10823 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ 6201 ಮತ ಚಲಾವಣೆಯಾಗಿದೆ. ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ 84 ಮತ ಪಡೆದಿದ್ದಾರೆ. 4622 ಮತಗಳ ಭಾರೀ ಅಂತರದಿಂದ ವಿವೇಕಾನಂದ ಜಯ ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 1049 ಅಸಿಂಧು ಮತಗಳೆಂದು ಚುನಾವಣೆ ಅಧಿಕಾರಿ ಘೋಷಿಸಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ವ್ಯಾಪ್ತಿಗೆ ಸೇರಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 20549 ಇತ್ತು. ಈ ಪೈಕಿ 18979 ಮತದಾರರು ಮತ ಚಲಾವಣೆ ಮಾಡಿದ್ದು 88.07% ಮತದಾನ ಆಗಿತ್ತು.
ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭೆ ಫಲಿತಾಂಶ ಬೆನ್ನಲ್ಲೇ ಮತ್ತೊಂದು ಸೋಲಿನ ಶಾಕ್ ಕಾಂಗ್ರೆಸಿಗೆ ಸಿಕ್ಕಿದೆ. ವಿಶೇಷ ಅಂದ್ರೆ, ಜೆಡಿಎಸ್ನಲ್ಲಿ ಇದೇ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮರಿತಿಬ್ಬೇಗೌಡ ಇತ್ತೀಚೆಗಷ್ಟೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಕಾಂಗ್ರೆಸ್ ಕಡೆಯಿಂದ ಸೀಟು ಗಿಟ್ಟಿಸಿಕೊಂಡಿದ್ದರು. ಇದೀಗ ಶಿಕ್ಷಕ ಮತದಾರ ಜೆಡಿಎಸ್- ಬಿಜೆಪಿ ಕೈಹಿಡಿದಿದ್ದು ಸಿದ್ದರಾಮಯ್ಯ ಮತ್ತು ಮರಿತಿಬ್ಬೇಗೌಡರಿಗೆ ಸೋಲಿನ ರುಚಿ ಕಾಣಿಸಿದ್ದಾರೆ. ಆಮೂಲಕ ಗ್ಯಾರಂಟಿ ಏನೂ ಚುನಾವಣೆ ಮೇಲೆ ಎಫೆಕ್ಟ್ ಆಗಿಲ್ಲವೆಂದು ಸಾರಿದ್ದಾರೆ.
CM Siddaramaiah home town Mysuru leads with JDS candidate Vivekananda going lead in Council elections. Counting of biennial polls for the Karnataka Legislative Council - from South Teachers, South West Teachers and SW Graduates constituencies - is underway at Maharani's Science College on JLB Road, in Mysuru, on Thursday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm