ಬ್ರೇಕಿಂಗ್ ನ್ಯೂಸ್
06-06-24 05:26 pm HK News Desk ಕರ್ನಾಟಕ
ಮೈಸೂರು, ಜೂನ್.6: ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ದಾಖಲಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು ಕಂಡಿದ್ದಾರೆ.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರವಾಗಿ 10823 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ 6201 ಮತ ಚಲಾವಣೆಯಾಗಿದೆ. ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ 84 ಮತ ಪಡೆದಿದ್ದಾರೆ. 4622 ಮತಗಳ ಭಾರೀ ಅಂತರದಿಂದ ವಿವೇಕಾನಂದ ಜಯ ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 1049 ಅಸಿಂಧು ಮತಗಳೆಂದು ಚುನಾವಣೆ ಅಧಿಕಾರಿ ಘೋಷಿಸಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ವ್ಯಾಪ್ತಿಗೆ ಸೇರಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 20549 ಇತ್ತು. ಈ ಪೈಕಿ 18979 ಮತದಾರರು ಮತ ಚಲಾವಣೆ ಮಾಡಿದ್ದು 88.07% ಮತದಾನ ಆಗಿತ್ತು.
ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭೆ ಫಲಿತಾಂಶ ಬೆನ್ನಲ್ಲೇ ಮತ್ತೊಂದು ಸೋಲಿನ ಶಾಕ್ ಕಾಂಗ್ರೆಸಿಗೆ ಸಿಕ್ಕಿದೆ. ವಿಶೇಷ ಅಂದ್ರೆ, ಜೆಡಿಎಸ್ನಲ್ಲಿ ಇದೇ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮರಿತಿಬ್ಬೇಗೌಡ ಇತ್ತೀಚೆಗಷ್ಟೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಕಾಂಗ್ರೆಸ್ ಕಡೆಯಿಂದ ಸೀಟು ಗಿಟ್ಟಿಸಿಕೊಂಡಿದ್ದರು. ಇದೀಗ ಶಿಕ್ಷಕ ಮತದಾರ ಜೆಡಿಎಸ್- ಬಿಜೆಪಿ ಕೈಹಿಡಿದಿದ್ದು ಸಿದ್ದರಾಮಯ್ಯ ಮತ್ತು ಮರಿತಿಬ್ಬೇಗೌಡರಿಗೆ ಸೋಲಿನ ರುಚಿ ಕಾಣಿಸಿದ್ದಾರೆ. ಆಮೂಲಕ ಗ್ಯಾರಂಟಿ ಏನೂ ಚುನಾವಣೆ ಮೇಲೆ ಎಫೆಕ್ಟ್ ಆಗಿಲ್ಲವೆಂದು ಸಾರಿದ್ದಾರೆ.
CM Siddaramaiah home town Mysuru leads with JDS candidate Vivekananda going lead in Council elections. Counting of biennial polls for the Karnataka Legislative Council - from South Teachers, South West Teachers and SW Graduates constituencies - is underway at Maharani's Science College on JLB Road, in Mysuru, on Thursday.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm