ಬ್ರೇಕಿಂಗ್ ನ್ಯೂಸ್
06-06-24 05:26 pm HK News Desk ಕರ್ನಾಟಕ
ಮೈಸೂರು, ಜೂನ್.6: ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ದಾಖಲಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು ಕಂಡಿದ್ದಾರೆ.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರವಾಗಿ 10823 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ 6201 ಮತ ಚಲಾವಣೆಯಾಗಿದೆ. ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ 84 ಮತ ಪಡೆದಿದ್ದಾರೆ. 4622 ಮತಗಳ ಭಾರೀ ಅಂತರದಿಂದ ವಿವೇಕಾನಂದ ಜಯ ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 1049 ಅಸಿಂಧು ಮತಗಳೆಂದು ಚುನಾವಣೆ ಅಧಿಕಾರಿ ಘೋಷಿಸಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ವ್ಯಾಪ್ತಿಗೆ ಸೇರಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 20549 ಇತ್ತು. ಈ ಪೈಕಿ 18979 ಮತದಾರರು ಮತ ಚಲಾವಣೆ ಮಾಡಿದ್ದು 88.07% ಮತದಾನ ಆಗಿತ್ತು.
ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭೆ ಫಲಿತಾಂಶ ಬೆನ್ನಲ್ಲೇ ಮತ್ತೊಂದು ಸೋಲಿನ ಶಾಕ್ ಕಾಂಗ್ರೆಸಿಗೆ ಸಿಕ್ಕಿದೆ. ವಿಶೇಷ ಅಂದ್ರೆ, ಜೆಡಿಎಸ್ನಲ್ಲಿ ಇದೇ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮರಿತಿಬ್ಬೇಗೌಡ ಇತ್ತೀಚೆಗಷ್ಟೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಕಾಂಗ್ರೆಸ್ ಕಡೆಯಿಂದ ಸೀಟು ಗಿಟ್ಟಿಸಿಕೊಂಡಿದ್ದರು. ಇದೀಗ ಶಿಕ್ಷಕ ಮತದಾರ ಜೆಡಿಎಸ್- ಬಿಜೆಪಿ ಕೈಹಿಡಿದಿದ್ದು ಸಿದ್ದರಾಮಯ್ಯ ಮತ್ತು ಮರಿತಿಬ್ಬೇಗೌಡರಿಗೆ ಸೋಲಿನ ರುಚಿ ಕಾಣಿಸಿದ್ದಾರೆ. ಆಮೂಲಕ ಗ್ಯಾರಂಟಿ ಏನೂ ಚುನಾವಣೆ ಮೇಲೆ ಎಫೆಕ್ಟ್ ಆಗಿಲ್ಲವೆಂದು ಸಾರಿದ್ದಾರೆ.
CM Siddaramaiah home town Mysuru leads with JDS candidate Vivekananda going lead in Council elections. Counting of biennial polls for the Karnataka Legislative Council - from South Teachers, South West Teachers and SW Graduates constituencies - is underway at Maharani's Science College on JLB Road, in Mysuru, on Thursday.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm