ಬ್ರೇಕಿಂಗ್ ನ್ಯೂಸ್
06-06-24 05:26 pm HK News Desk ಕರ್ನಾಟಕ
ಮೈಸೂರು, ಜೂನ್.6: ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಮೊದಲ ಪ್ರಾಶಸ್ತ್ಯದ ಮತಗಳಿಂದಲೇ ಗೆಲುವು ದಾಖಲಿಸಿದ್ದಾರೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಭ್ಯರ್ಥಿ ಪ್ರಥಮ ಪ್ರಾಶಸ್ತ್ಯ ಮತದಲ್ಲಿ ಗೆಲುವು ಕಂಡಿದ್ದಾರೆ.
ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರವಾಗಿ 10823 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಪರವಾಗಿ 6201 ಮತ ಚಲಾವಣೆಯಾಗಿದೆ. ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ 84 ಮತ ಪಡೆದಿದ್ದಾರೆ. 4622 ಮತಗಳ ಭಾರೀ ಅಂತರದಿಂದ ವಿವೇಕಾನಂದ ಜಯ ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಒಟ್ಟು 1049 ಅಸಿಂಧು ಮತಗಳೆಂದು ಚುನಾವಣೆ ಅಧಿಕಾರಿ ಘೋಷಿಸಿದ್ದಾರೆ.
ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಜಿಲ್ಲೆಗಳ ವ್ಯಾಪ್ತಿಗೆ ಸೇರಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 20549 ಇತ್ತು. ಈ ಪೈಕಿ 18979 ಮತದಾರರು ಮತ ಚಲಾವಣೆ ಮಾಡಿದ್ದು 88.07% ಮತದಾನ ಆಗಿತ್ತು.
ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರ ಮೈಸೂರಿನಲ್ಲಿ ಲೋಕಸಭೆ ಫಲಿತಾಂಶ ಬೆನ್ನಲ್ಲೇ ಮತ್ತೊಂದು ಸೋಲಿನ ಶಾಕ್ ಕಾಂಗ್ರೆಸಿಗೆ ಸಿಕ್ಕಿದೆ. ವಿಶೇಷ ಅಂದ್ರೆ, ಜೆಡಿಎಸ್ನಲ್ಲಿ ಇದೇ ಕ್ಷೇತ್ರದಲ್ಲಿ ಶಾಸಕರಾಗಿದ್ದ ಮರಿತಿಬ್ಬೇಗೌಡ ಇತ್ತೀಚೆಗಷ್ಟೇ ಪಕ್ಷ ಬಿಟ್ಟು ಕಾಂಗ್ರೆಸ್ ಸೇರಿದ್ದರು. ಅಲ್ಲದೆ, ಕಾಂಗ್ರೆಸ್ ಕಡೆಯಿಂದ ಸೀಟು ಗಿಟ್ಟಿಸಿಕೊಂಡಿದ್ದರು. ಇದೀಗ ಶಿಕ್ಷಕ ಮತದಾರ ಜೆಡಿಎಸ್- ಬಿಜೆಪಿ ಕೈಹಿಡಿದಿದ್ದು ಸಿದ್ದರಾಮಯ್ಯ ಮತ್ತು ಮರಿತಿಬ್ಬೇಗೌಡರಿಗೆ ಸೋಲಿನ ರುಚಿ ಕಾಣಿಸಿದ್ದಾರೆ. ಆಮೂಲಕ ಗ್ಯಾರಂಟಿ ಏನೂ ಚುನಾವಣೆ ಮೇಲೆ ಎಫೆಕ್ಟ್ ಆಗಿಲ್ಲವೆಂದು ಸಾರಿದ್ದಾರೆ.
CM Siddaramaiah home town Mysuru leads with JDS candidate Vivekananda going lead in Council elections. Counting of biennial polls for the Karnataka Legislative Council - from South Teachers, South West Teachers and SW Graduates constituencies - is underway at Maharani's Science College on JLB Road, in Mysuru, on Thursday.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm