ಬ್ರೇಕಿಂಗ್ ನ್ಯೂಸ್
07-06-24 05:17 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 07: ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರು ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ.
ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಕುಮಾರ್ ಎಂಬುವವರು ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.
ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ವಾಟದಹೊಸಹಳ್ಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಂತೆ ನಾಲ್ವರು ಅಧಿಕಾರಿಗಳು ಕಾರಿನಲ್ಲಿ ನಗರಗೆರೆಯಿಂದ ವಾಟದಹೊಸಹಳ್ಳಿ ಬರುತ್ತಿದ್ದರು. ನಗರಗೆರೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಬಿದ್ದಿದೆ. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಘಟನೆ ಬಳಿಕ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Three BESCOM staffs killed in road accident at chikkaballapur after their breeza car lost control and fell to a pond. One of the body of a bescome staff was hanging at the tree beside the pond.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm