ಬ್ರೇಕಿಂಗ್ ನ್ಯೂಸ್
07-06-24 05:17 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 07: ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರು ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ.
ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಕುಮಾರ್ ಎಂಬುವವರು ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.
ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ವಾಟದಹೊಸಹಳ್ಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಂತೆ ನಾಲ್ವರು ಅಧಿಕಾರಿಗಳು ಕಾರಿನಲ್ಲಿ ನಗರಗೆರೆಯಿಂದ ವಾಟದಹೊಸಹಳ್ಳಿ ಬರುತ್ತಿದ್ದರು. ನಗರಗೆರೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಬಿದ್ದಿದೆ. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಘಟನೆ ಬಳಿಕ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Three BESCOM staffs killed in road accident at chikkaballapur after their breeza car lost control and fell to a pond. One of the body of a bescome staff was hanging at the tree beside the pond.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm