ಬ್ರೇಕಿಂಗ್ ನ್ಯೂಸ್
07-06-24 05:17 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜೂ 07: ಭೀಕರ ಅಪಘಾತವೊಂದರಲ್ಲಿ ಕಾರು ಕಾಲುವೆಗೆ ಬಿದ್ದು ಮೂವರು ಸಾವನ್ನಪ್ಪಿ, ಒಬ್ಬರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ನಡೆದಿದೆ.
ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರು ಬೆಚ್ಚಿಬಿದ್ದಿದ್ದಾರೆ.
ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ.
ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಶಿವಕುಮಾರ್ ಎಂಬುವವರು ಗಾಯಗೊಂಡಿದ್ದು, ಬೆಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ.
ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ ನಾಲ್ವರು ಅಧಿಕಾರಿಗಳನ್ನು ವಾಟದಹೊಸಹಳ್ಳಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಇದರಂತೆ ನಾಲ್ವರು ಅಧಿಕಾರಿಗಳು ಕಾರಿನಲ್ಲಿ ನಗರಗೆರೆಯಿಂದ ವಾಟದಹೊಸಹಳ್ಳಿ ಬರುತ್ತಿದ್ದರು. ನಗರಗೆರೆ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಬಿದ್ದಿದೆ. ಈ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಘಟನೆ ಬಳಿಕ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ಬೆಸ್ಕಾಂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
Three BESCOM staffs killed in road accident at chikkaballapur after their breeza car lost control and fell to a pond. One of the body of a bescome staff was hanging at the tree beside the pond.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 08:10 pm
Mangalore Correspondent
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm