ಬ್ರೇಕಿಂಗ್ ನ್ಯೂಸ್
07-06-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 7: ಉತ್ತರಾಖಂಡ ರಾಜ್ಯದ ಸಹಸ್ತ್ರ ತಾಲ್ಗೆ ಚಾರಣಕ್ಕೆ ತೆರಳಿ, ಹವಾಮಾನ ವೈಪರೀತ್ಯದಿಂದ ಅಪಾಯಕ್ಕೆ ಸಿಲುಕಿ ಮೃತಪಟ್ಟ ಒಂಬತ್ತು ಮಂದಿ ಕನ್ನಡಿಗರ ಮೃತದೇಹಗಳನ್ನು ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿದ್ದು ಶುಕ್ರವಾರ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.
ಮೃತದೇಹಗಳನ್ನು ಪಡೆಯುತ್ತಿದ್ದಂತೆ ಶೋಕತಪ್ತ ಸಂಬಂಧಿಕರು ಕಣ್ಣೀರು ಹಾಕಿದರು. ಸ್ಥಳದಲ್ಲಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪಾರ್ಥಿವ ಶರೀರಗಳಿಗೆ ಅಂತಿಮ ನಮನ ಸಲ್ಲಿಸಿದರು. ಶಿರಸಿಯ ಪದ್ಮಿನಿ ಹೆಗಡೆ, ವೆಂಕಟೇಶ್ ಪ್ರಸಾದ್, ಆಶಾ ಸುಧಾಕರ್, ಪದ್ಮನಾಭ ಭಟ್ ಕುಂದಾಪುರ, ಕೃಷ್ಣಮೂರ್ತಿ, ಸಿಂಧು ವಕೆರಲಂ, ವಿನಾಯಕ್ ಮುಂಗುರವಾಡಿ, ಸುಜಾತಾ ಮುಂಗುರವಾಡಿ, ಚಿತ್ರಾ ಪ್ರಣೀತ್, ಅನಿತಾ ರಂಗಪ್ಪ ದುರಂತದಲ್ಲಿ ಮೃತಪಟ್ಟವರು.
ಸಾವಲ್ಲೂ ಒಂದಾದ ಹುಬ್ಬಳ್ಳಿ ದಂಪತಿ
ಚಾರಣಕ್ಕೆ ತೆರಳಿ ಹಿಮಪಾತದಿಂದ ಸಾವನ್ನಪ್ಪಿದ 9 ಕನ್ನಡಿಗರಲ್ಲಿ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿಯೂ ಇದ್ದಾರೆ. ಕರ್ನಾಟಕದಿಂದ ತೆರಳಿದ್ದ 22 ಚಾರಣಿಗರ ತಂಡ ಉತ್ತರಾಖಂಡದ ಸಹಸ್ತ್ರತಾಲ್ ಪರ್ವತ ಪ್ರದೇಶಕ್ಕೆ ತೆರಳಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗುತ್ತಿದ್ದಾಗ ಹಿಮಗಾಳಿಯಿಂದಾಗಿ ಹವಾಮಾನ ಹದಗೆಟ್ಟಿದ್ದು ಎಲ್ಲ ಚಾರಣಿಗರು ಅಪಾಯಕ್ಕೆ ಸಿಲುಕಿದ್ದರು. ಇದರಲ್ಲಿ 9 ಚಾರಣಿಗರು ಹಿಮದಿಂದಾಗಿ ತೀವ್ರ ಚಳಿಗೆ ಮೃತಪಟ್ಟಿದ್ದು, 13 ಜನರನ್ನು ರಕ್ಷಣೆ ಮಾಡಲಾಗಿದೆ. ಇವರಲ್ಲಿ ಹುಬ್ಬಳ್ಳಿ ಮೂಲದ ವಿನಾಯಕ ಮುಂಗುರವಾಡಿ ಹಾಗೂ ಸುಜಾತಾ ಮುಂಗುರವಾಡಿ ದಂಪತಿ ದುರಂತ ಸಾವು ಕಂಡಿದ್ದಾರೆ. ಈ ದಂಪತಿಯ ಹುಟ್ಟಿದ ದಿನ ಒಂದೇ(ಅಕ್ಟೋಬರ್ 3) ಆಗಿತ್ತು. ವಿಪರ್ಯಾಸವೆಂದರೆ ಜೂನ್ 4ರಂದು ಒಟ್ಟಿಗೇ ಮೃತಪಟ್ಟು ಸಾವಲ್ಲೂ ಒಂದಾಗಿದ್ದಾರೆ.
ಇವರಿಬ್ಬರೂ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ 1994 ರಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದರು. ವಿನಾಯಕ ಮೆಕ್ಯಾನಿಕಲ್ ವಿಭಾಗದಿಂದ ಚಿನ್ನದ ಪದಕ ಪಡೆದಿದ್ದರು. ಆರಂಭದ ದಿನಗಳಲ್ಲಿ ಹುಬ್ಬಳ್ಳಿಯ ಉಣಕಲ್ನಲ್ಲಿ ವಾಸವಿದ್ದ ಇಬ್ಬರೂ ಉದ್ಯೋಗ ಅರಸಿಕೊಂಡು 1996ರಲ್ಲಿ ಬೆಂಗಳೂರಿಗೆ ತೆರಳಿದ್ದರು. ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಲೇ 'ಉತ್ತರ ಕರ್ನಾಟಕ ಸ್ನೇಹಲೋಕ ಟ್ರಸ್ಟ್' ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ಕಳೆದ 16 ವರ್ಷಗಳಿಂದ ಜನರ ಸೇವೆಯಲ್ಲಿ ತೊಡಗಿದ್ದರು. ಪ್ರತಿ ವರ್ಷ ಚಾರಣ ಹೋಗುವುದು ಇವರ ಹವ್ಯಾಸ ಆಗಿತ್ತು.
The bodies of all nine persons from Bengaluru, who lost their lives during the Sahastra Tal trek in Uttarakhand, were handed over to their families here on Friday. While 13 survivors of the 22-member group from Bengaluru arrived in the city on Thursday, the bodies arrived Friday on commercial flights from Delhi.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 06:07 pm
HK News Desk
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm