ಬ್ರೇಕಿಂಗ್ ನ್ಯೂಸ್
08-06-24 10:53 am HK News Desk ಕರ್ನಾಟಕ
ಮಂಡ್ಯ, ಜೂನ್ 8: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ. ಫುಲ್ ಟೈಮ್ ಪಕ್ಷದಲ್ಲಿಯೇ ತೊಡಗಿಸಿಕೊಳ್ಳುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿನಿಮಾ ರಂಗವನ್ನು ಸದ್ಯಕ್ಕೆ ಪೂರ್ತಿ ಬಂದ್ ಮಾಡಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣದಲ್ಲಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ. ಶೀಘ್ರ ದಲ್ಲಿ ಚನ್ನಪಟ್ಟಣದ ಜನತೆಗೆ ಕೃತಜ್ಞತೆ ಸಲ್ಲಿಸಲಾಗುವುದು. ನಂತರ ಮಂಡ್ಯದಲ್ಲಿ ಸಭೆ ನಡೆಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ಹೇಳಿದರು.
ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಚುನಾವಣೆ ವೇಳೆ ವೇದಿಕೆ ಹಂಚಿಕೊಳ್ಳಲಾಗದಿದ್ದರೂ ಕುಮಾರಣ್ಣನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜನಪ್ರತಿನಿಧಿಗಳಾದವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮಾತುಗಳ ಮೇಲೆ ಹಿಡಿತವಿರಬೇಕು. ಅಧಿಕಾರದಲ್ಲಿದ್ದಾಗ ಏನು ಬೇಕಾದರೂ ಮಾತಾಡಬಹುದೆಂಬ ಉದ್ಧಟತನವನ್ನು ಬಿಡಬೇಕು. ಮದ್ದೂರು ಶಾಸಕರು ನೀಡಿದ್ದ ಅಸಂಬದ್ಧ ಹೇಳಿಕೆಗೆ ಈಗ ಜನರೇ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ನಿಲ್ಲಬೇಕೆಂಬುದು ಜನರ ಅಪೇಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡುತ್ತಾರೆ ಎಂದರು.
ಚುನಾವಣೆಗೆ ಮುನ್ನ ಅಥವಾ ನಂತರ ಇಂತಹ ಖಾತೆ ಬೇಕೆಂದು ಎಚ್ಡಿಕೆಯವರು ಬೇಡಿಕೆ ಇಟ್ಟಿಲ್ಲ. ಎರಡು ಬಾರಿ ಸಿಎಂ ಆಗಿದ್ದರು. ನಾಡಿಗೆ ಅವರದೇ ಆದ ಸೇವೆ ಸಲ್ಲಿಸಿದ್ದಾರೆ. ಮೂರು ಬಾರಿ ಸಂಸದರಾಗಿದ್ದಾರೆ. ಈ ಅನುಭವದ ಆಧಾರದ ಮೇಲೆ ಕೇಂದ್ರದ ನಾಯಕರು ಸಂಪುಟದಲ್ಲಿ ಸ್ಥಾನ ಕೊಡಬಹುದು. ಈ ನಾಡನ್ನು ಕಟ್ಟಲು ಬಿಜೆಪಿಯ ಕೇಂದ್ರದ ನಾಯಕರು ಕುಮಾರಸ್ವಾಮಿ ಅವರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಪರೋಕ್ಷವಾಗಿ ನಿಖಿಲ್ ತಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟರು.
The superiors have given me the responsibility of building the party in the state. So he no longer acts in movies. JDS Youth Unit State President Nikhil Kumaraswamy said that there is no idea of making a movie at the moment.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
17-05-25 01:01 pm
Mangalore Correspondent
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm