ಬ್ರೇಕಿಂಗ್ ನ್ಯೂಸ್
08-06-24 10:53 am HK News Desk ಕರ್ನಾಟಕ
ಮಂಡ್ಯ, ಜೂನ್ 8: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ. ಫುಲ್ ಟೈಮ್ ಪಕ್ಷದಲ್ಲಿಯೇ ತೊಡಗಿಸಿಕೊಳ್ಳುತ್ತೇನೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಸಿನಿಮಾ ರಂಗವನ್ನು ಸದ್ಯಕ್ಕೆ ಪೂರ್ತಿ ಬಂದ್ ಮಾಡಿದ್ದೇನೆ. ಇನ್ನು ಮುಂದೆ ಸಂಪೂರ್ಣ ರಾಜಕಾರಣದಲ್ಲಿರುತ್ತೇನೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇನೆ. ಶೀಘ್ರ ದಲ್ಲಿ ಚನ್ನಪಟ್ಟಣದ ಜನತೆಗೆ ಕೃತಜ್ಞತೆ ಸಲ್ಲಿಸಲಾಗುವುದು. ನಂತರ ಮಂಡ್ಯದಲ್ಲಿ ಸಭೆ ನಡೆಸಿ ಮತದಾರರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ಹೇಳಿದರು.
ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಚುನಾವಣೆ ವೇಳೆ ವೇದಿಕೆ ಹಂಚಿಕೊಳ್ಳಲಾಗದಿದ್ದರೂ ಕುಮಾರಣ್ಣನ ಗೆಲುವಿಗೆ ಸಹಕಾರ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜನಪ್ರತಿನಿಧಿಗಳಾದವರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಮಾತುಗಳ ಮೇಲೆ ಹಿಡಿತವಿರಬೇಕು. ಅಧಿಕಾರದಲ್ಲಿದ್ದಾಗ ಏನು ಬೇಕಾದರೂ ಮಾತಾಡಬಹುದೆಂಬ ಉದ್ಧಟತನವನ್ನು ಬಿಡಬೇಕು. ಮದ್ದೂರು ಶಾಸಕರು ನೀಡಿದ್ದ ಅಸಂಬದ್ಧ ಹೇಳಿಕೆಗೆ ಈಗ ಜನರೇ ಉತ್ತರ ನೀಡಿದ್ದಾರೆ ಎಂದು ಹೇಳಿದರು.
ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದರು. ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ನಿಲ್ಲಬೇಕೆಂಬುದು ಜನರ ಅಪೇಕ್ಷೆಯಾಗಿತ್ತು. ಈ ಹಿನ್ನೆಲೆಯಲ್ಲಿ ಎಲ್ಲ ವರ್ಗದ ಜನರು ಕುಮಾರಣ್ಣಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಐದು ವರ್ಷ ಕುಮಾರಣ್ಣ ಜನಪರ ಕೆಲಸ ಮಾಡುತ್ತಾರೆ ಎಂದರು.
ಚುನಾವಣೆಗೆ ಮುನ್ನ ಅಥವಾ ನಂತರ ಇಂತಹ ಖಾತೆ ಬೇಕೆಂದು ಎಚ್ಡಿಕೆಯವರು ಬೇಡಿಕೆ ಇಟ್ಟಿಲ್ಲ. ಎರಡು ಬಾರಿ ಸಿಎಂ ಆಗಿದ್ದರು. ನಾಡಿಗೆ ಅವರದೇ ಆದ ಸೇವೆ ಸಲ್ಲಿಸಿದ್ದಾರೆ. ಮೂರು ಬಾರಿ ಸಂಸದರಾಗಿದ್ದಾರೆ. ಈ ಅನುಭವದ ಆಧಾರದ ಮೇಲೆ ಕೇಂದ್ರದ ನಾಯಕರು ಸಂಪುಟದಲ್ಲಿ ಸ್ಥಾನ ಕೊಡಬಹುದು. ಈ ನಾಡನ್ನು ಕಟ್ಟಲು ಬಿಜೆಪಿಯ ಕೇಂದ್ರದ ನಾಯಕರು ಕುಮಾರಸ್ವಾಮಿ ಅವರನ್ನು ಬಳಕೆ ಮಾಡಿಕೊಳ್ಳುತ್ತಾರೆ ಎಂಬ ನಂಬಿಕೆಯಿದೆ ಎಂದು ಪರೋಕ್ಷವಾಗಿ ನಿಖಿಲ್ ತಂದೆ ಕೇಂದ್ರ ಸಚಿವರಾಗಲಿದ್ದಾರೆ ಎಂಬ ಸುಳಿವು ಬಿಟ್ಟುಕೊಟ್ಟರು.
The superiors have given me the responsibility of building the party in the state. So he no longer acts in movies. JDS Youth Unit State President Nikhil Kumaraswamy said that there is no idea of making a movie at the moment.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm