ಬ್ರೇಕಿಂಗ್ ನ್ಯೂಸ್
10-06-24 11:31 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 10: ತಿರುವನಂತಪುರಂ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ವಿರುದ್ಧ ಸೋಲನುಭವಿಸಿದ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತನ್ನ ರಾಜಕೀಯ ಜೀವನದ ಬಗ್ಗೆ ಟ್ವಿಟರ್ ನಲ್ಲಿ ಭಾವುಕ ಪೋಸ್ಟ್ ಮಾಡಿದ್ದಾರೆ.
18 ವರ್ಷಗಳ ನಂತರ ಸಂಸದ/ಸಚಿವನಾಗಿ ನನ್ನ ವೃತ್ತಿಜೀವನವು ಕೊನೆಗೊಂಡಿದೆ. ಅನೇಕ ಜನರು ನನ್ನ ಟ್ವೀಟ್ ಅನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ. ಈ ಪೋಸ್ಟ್ ಮೂಲಕ ನಾನು ಸ್ಪಷ್ಟೀಕರಣವನ್ನು ನೀಡುತ್ತಿದ್ದೇನೆ. ಇಂದು ನನ್ನ 18 ವರ್ಷಗಳ ಸಾರ್ವಜನಿಕ ಸೇವೆ ಕೊನೆಗೊಂಡಿದೆ. ನನಗೆ ಮೋದಿ ಸರ್ಕಾರ 2.0 ನಲ್ಲಿ 3 ವರ್ಷಗಳ ಕಾಲ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು ಎಂದು ಬರೆದಿದ್ದಾರೆ.
ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಾಗಿ ನನ್ನ 18 ವರ್ಷಗಳ ಸಾರ್ವಜನಿಕ ಸೇವೆಯನ್ನು ಖಂಡಿತವಾಗಿಯೂ ಕೊನೆಗೊಳಿಸಲು ನಾನು ಬಯಸಲಿಲ್ಲ, ಆದರೆ ಅದು ಸಂಭವಿಸಿದೆ. ಇದಕ್ಕೆ ನಾನು ತುಂಬಾ ವಿಷಾದಿಸುತ್ತೇನೆ. ನನ್ನನ್ನು ಬೆಂಬಲಿಸಿದ ಎಲ್ಲರಿಗೂ ಮತ್ತು ವಿಶೇಷವಾಗಿ ಕಳೆದ 3 ವರ್ಷಗಳಲ್ಲಿ ನನಗೆ ಸ್ಫೂರ್ತಿ ಮತ್ತು ಶಕ್ತಿ ತುಂಬಿದ ನನ್ನ ಸಹೋದ್ಯೋಗಿಗಳಿಗೆ ಧನ್ಯವಾದಗಳು ಎಂದು ಬರೆದಿದ್ದಾರೆ.
ಕೇರಳದ ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಅವರನ್ನು 16,077 ಮತಗಳ ಅಂತರದಿಂದ ಸೋಲಿಸುವ ಮೂಲಕ ಕಾಂಗ್ರೆಸ್ ನ ಶಶಿ ತರೂರ್ ಸತತ ನಾಲ್ಕನೇ ಗೆಲುವು ದಾಖಲಿಸಿದ್ದಾರೆ.
Former Union minister Rajeev Chandrasekhar, who lost to Congress candidate Shashi Tharoor in Thiruvananthapuram Lok Sabha constituency, posted an emotional post on Twitter about his political career.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm