ಬ್ರೇಕಿಂಗ್ ನ್ಯೂಸ್
11-06-24 11:01 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಕೊಲೆ ಪ್ರಕರಣ ಒಂದರಲ್ಲಿ ಖ್ಯಾತ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ಮನೆಯಿಂದ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದರ್ಶನ್ ಜೊತೆಗಿದ್ದ ಹತ್ತು ಮಂದಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.



ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ. ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು. ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Kannada actor Darshan has been reportedly arrested by the Kamakshi Palya cops in connection with a murder case. According to media reports, he has been arrested in connection with the murder of a man named Renuka Swamy, who allegedly sent obscene messages to actress Pavithra Gowda. A total of 10 people have been arrested.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm