ಬ್ರೇಕಿಂಗ್ ನ್ಯೂಸ್
11-06-24 11:01 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಕೊಲೆ ಪ್ರಕರಣ ಒಂದರಲ್ಲಿ ಖ್ಯಾತ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ಮನೆಯಿಂದ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದರ್ಶನ್ ಜೊತೆಗಿದ್ದ ಹತ್ತು ಮಂದಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.



ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ. ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು. ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Kannada actor Darshan has been reportedly arrested by the Kamakshi Palya cops in connection with a murder case. According to media reports, he has been arrested in connection with the murder of a man named Renuka Swamy, who allegedly sent obscene messages to actress Pavithra Gowda. A total of 10 people have been arrested.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm