ಬ್ರೇಕಿಂಗ್ ನ್ಯೂಸ್
11-06-24 11:01 am Bangalore Correspondent ಕರ್ನಾಟಕ
ಬೆಂಗಳೂರು, ಜೂನ್ 11: ಕೊಲೆ ಪ್ರಕರಣ ಒಂದರಲ್ಲಿ ಖ್ಯಾತ ಚಿತ್ರನಟ ದರ್ಶನ್ ಅವರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಫಾರ್ಮ್ ಹೌಸ್ ಮನೆಯಿಂದ ಪೊಲೀಸರು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದೊಯ್ದಿದ್ದಾರೆ. ದರ್ಶನ್ ಜೊತೆಗಿದ್ದ ಹತ್ತು ಮಂದಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ಭಾನುವಾರ ಬೆಳಗ್ಗೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಯುವಕನ ಶವ ಪತ್ತೆಯಾಗಿತ್ತು. ಶವವನ್ನು ನಾಯಿಗಳು ಎಳೆದಾಡುತ್ತಿದ್ದಾಗ ಸ್ಥಳೀಯರು ನೋಡಿ ಪೊಲೀಸರಿಗೆ ತಿಳಿಸಿದ್ದರು. ಚಿತ್ರದುರ್ಗದಿಂದ ಯುವಕನನ್ನು ಕರೆತಂದು ಬೆಂಗಳೂರಿನಲ್ಲಿ ಕೊಲೆ ಮಾಡಲಾಗಿತ್ತು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ರೇಣುಕಾಸ್ವಾಮಿ ಎಂಬ ಯುವಕ ನಟ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ.
ಇದನ್ನು ಪ್ರಶ್ನಿಸಿ ದರ್ಶನ್ ಮತ್ತು ಇತರ ಯುವಕರು ಹಲ್ಲೆ ನಡೆಸಿದ್ದು, ತಲೆಗೆ ದೊಣ್ಣೆಯಲ್ಲಿ ಹೊಡೆದಿದ್ದರು ಎನ್ನಲಾಗಿದೆ. ಈ ವೇಳೆ, ರೇಣುಕಾಸ್ವಾಮಿ ಕುಸಿದು ಬಿದ್ದು ಮೃತಪಟ್ಟಿದ್ದ. ಸ್ಥಳೀಯರ ಮಾಹಿತಿಯಂತೆ ಅಪರಿಚಿತ ಶವ ಪತ್ತೆಯೆಂದು ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದರು. ಬೆಂಗಳೂರಿನ ಅಪೋಲೊ ಮೆಡಿಕಲ್ ನಲ್ಲಿ ಕೆಲಸಕ್ಕಿದ್ದ ರೇಣುಕಾಸ್ವಾಮಿ ಕೊಲೆಯಾದ ಯುವಕ ಎಂದು ಪೊಲೀಸರು ಪತ್ತೆ ಮಾಡಿದ್ದರು. ತನಿಖೆಯಲ್ಲಿ ಈತ ಪವಿತ್ರಾ ಗೌಡ ಅವರ ಇನ್ ಸ್ಟಾ ಗ್ರಾಮ್ ನಲ್ಲಿ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಎನ್ನುವ ಮಾಹಿತಿ ಕಲೆಹಾಕಿದ್ದರು. ಕೊಲೆ ಕೃತ್ಯದಲ್ಲಿ ದರ್ಶನ್ ಕೈವಾಡ ಇರುವುದನ್ನು ದೃಢಪಡಿಸಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
Kannada actor Darshan has been reportedly arrested by the Kamakshi Palya cops in connection with a murder case. According to media reports, he has been arrested in connection with the murder of a man named Renuka Swamy, who allegedly sent obscene messages to actress Pavithra Gowda. A total of 10 people have been arrested.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm