ಬ್ರೇಕಿಂಗ್ ನ್ಯೂಸ್
11-06-24 12:01 pm Bangalore Correspondent ಕರ್ನಾಟಕ
ಬೆಂಗಳೂರು, ಜೂನ್.11: ಚಿತ್ರದುರ್ಗ ಮೂಲದ ಯುವಕನ ಕೊಲೆ ಪ್ರಕರಣ ಸಂಬಂಧಿಸಿ ನಟ ದರ್ಶನ್ ತೂಗುದೀಪ ಸೇರಿ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ್ ತಿಳಿಸಿದ್ದಾರೆ.
ಭಾನುವಾರ ಬೆಳಗ್ಗೆ ಕಾಮಾಕ್ಷಿಪಾಳ್ಯದ ಮೋರಿ ಒಂದರಲ್ಲಿ ಶವ ಪತ್ತೆಯಾಗಿತ್ತು. ಸ್ಥಳೀಯರ ಮಾಹಿತಿ ಆಧರಿಸಿ ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆ ಕೈಗೊಂಡಿದ್ದರು. ಪ್ರಕರಣ ಸಂಬಂಧಿಸಿ ನಟ ದರ್ಶನ್ ಮತ್ತು ಆತನ ಸಹಚರರನ್ನು ಬಂಧಿಸಿ ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.
ಬಂಧಿತರಲ್ಲಿ ಬೆಂಗಳೂರಿನ ಉದ್ಯಮಿಯೊಬ್ಬರ ಮಗ ವಿನಯ್ ಮತ್ತು ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಎಂಬವರೂ ಸೇರಿದ್ದಾರೆ. ಚಿತ್ರದುರ್ಗ ನಗರದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ವಿನಯ್ ಗೆ ಸೇರಿ ಮನೆಯಲ್ಲಿಟ್ಟು ಹಲ್ಲೆ ನಡೆಸಿದ್ದಾರೆ. ಕೊಲೆಗೈದು ಮೋರಿಗೆ ಎಸೆದು ಹೋಗಿದ್ದರು. ಈ ಕೃತ್ಯದಲ್ಲಿ ದರ್ಶನ್ ಅವರ ಪಾತ್ರವೂ ಇದೆಯೆಂಬ ಮಾಹಿತಿ ಆಧರಿಸಿ ಪೊಲೀಸರು ಬಂಧನ ಮಾಡಿದ್ದಾರೆ.
ರೇಣುಕಾಸ್ವಾಮಿ ಚಿತ್ರದುರ್ಗದಲ್ಲಿ ಮೆಸ್ಕಾಂ ಅಧಿಕಾರಿಯಾಗಿರುವ ಶಿವನಗೌಡ ಎಂಬವರ ಪುತ್ರನಾಗಿದ್ದು ಮದುವೆಯಾಗಿ ಪತ್ನಿ ಮೂರು ತಿಂಗಳ ಗರ್ಭಿಣಿಯೆಂದು ತಿಳಿದುಬಂದಿದೆ. ರೇಣುಕಾನನ್ನು ಶನಿವಾರ ಬೆಂಗಳೂರಿಗೆ ಕರೆತಂದಿದ್ದು, ಭಾನುವಾರ ನಸುಕಿನಲ್ಲಿ ಕೊಲೆಗೈದು ರಸ್ತೆ ಬದಿಯ ಚರಂಡಿಗೆ ಎಸೆದು ಹೋಗಿದ್ದರು. ಪ್ರಾಥಮಿಕ ಮಾಹಿತಿ ಪ್ರಕಾರ, ಈತ ದರ್ಶನ್ ಅವರ ಮಾಜಿ ಪ್ರಿಯತಮೆ ಪವಿತ್ರಾ ಗೌಡ ಎಂಬಾಕೆಗೆ ಪದೇ ಪದೇ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಇದೇ ಕಾರಣಕ್ಕೆ ದರ್ಶನ್ ಮತ್ತು ತಂಡ ಹಲ್ಲೆಗೈದು ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಬಂಧಿಸಿ ಆರ್.ಆರ್ ನಗರ ಠಾಣೆ ಪೊಲೀಸರು ಪವಿತ್ರಾ ಗೌಡ ಅವರನ್ನೂ ವಶಕ್ಕೆ ಪಡೆದಿದ್ದಾರೆ.
Actress Pavithra Gowda taken to custody by police soon after arrest of Actor Darshan. Darshan along with nine others have been arrested by the cops in a murder case of Renuka Swamy. His body was found in a drainage near an apartment in Kamakshi Palya on Saturday.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm